ನವದೆಹಲಿ: ಪಹಲ್ಗಾಮ್ ನ ಘಟನೆಗೆ ಭಾರತೀಯ ಯೋಧರು ಸೇಡು ತೀರಿಸಿಕೊಂಡಿದ್ದಾರೆ. 26 ಜನ ಭಾರತೀಯ ಮಹಿಳೆಯರ ಸಿಂಧೂರ ಅಳಿಸಿದ್ದ ಉಗ್ರರ ಹೆಡೆಮೂರಿ ಕಟ್ಟಲಾಗಿದೆ. ಮೋದಿ ಹೇಳಿದಂತೆ ನಡೆದುಕೊಂಡಿದ್ದಾರೆ. ರಾತ್ರೋ ರಾತ್ರಿ ಪಾಕ್ ಉಗ್ರತಾಣಗಳನ್ನು ಉಡೀಸ್ ಮಾಡಲಾಗಿದೆ.
80ಕ್ಕೂ ಅಹೆಚ್ಚು ಉಗ್ರರನ್ನು ಸೇನೆ ಬಲಿ ಪಡೆದಿದೆ. ಭಾರತದ ಸೇನಾ (Indian Army) ಕಾರ್ಯಾಚರಣೆಯಿಂದ ಇಡೀ ದೇಶವೇ ಹೆಮ್ಮೆಪಡುತ್ತಿದೆ. ಹೀಗಾಗಿ ನಮ್ಮ ಹೆಮ್ಮೆಯ ಯೋಧರಿಗೆ ಭಾರತ ಸೇರಿದಂತೆ ಇಡೀ ವಿಶ್ವ ಹೆಮ್ಮೆಯ ಮಾತುಗಳನ್ನು ಹೇಳುತ್ತಿದೆ. ಈ ಮಧ್ಯೆ ಕಾಂಗ್ರೆಸ್ ಯಡವಟ್ಟು ಮಾಡಿಕೊಂಡು ಜನರ ಕೆಂಗಣ್ಣಿಗೆ ಗುರಿಯಾಗಿದೆ.
ಕರ್ನಾಟಕ ಕಾಂಗ್ರೆಸ್ (Karnataka Congress) ಮಹಾತ್ಮ ಗಾಂಧೀಜಿ ಅವರ ಸಂದೇಶ ಹಂಚಿಕೊಂಡಿದ್ದು ಮತ್ತೆ ಎಡವಟ್ಟು ಮಾಡಿಕೊಂಡಿದೆ. ಆಪರೇಷನ್ ಸಿಂಧೂರʼ (Operation Sindoor)ಯಶಸ್ಸಿನ ನಂತರ ಕಾಂಗ್ರೆಸ್, ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ರಾಜ್ಯ ಕಾಂಗ್ರೆಸ್, ಮಹಾತ್ಮ ಗಾಂಧಿ ಅವರ ʻಮನುಕುಲದ ಅತ್ಯಂತ ಶಕ್ತಿಯುತ ಶಸ್ತ್ರ ಎಂದರೆ ಶಾಂತಿʼ ಎಂಬ ಸಂದೇಶವನ್ನು ಹಂಚಿಕೊಂಡಿದೆ. ಆಗ ಕಾಂಗ್ರೆಸ್ ವಿರುದ್ಧ ನೆಟ್ಟಿಗರು, ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಂತೆ ಅದನ್ನು ಡಿಲೀಟ್ ಮಾಡಿದೆ. ಮತ್ತೊಂದು ಪೋಸ್ಟ್ ಹಂಚಿಕೊಂಡು ಸೇನೆಯನ್ನು ಕೊಂಡಾಡಿದೆ.
ವಿಶ್ವದ ಬಲಿಷ್ಠ ವಾಯುಪಡೆಗಳಲ್ಲಿ ಒಂದೆಂದು ವ್ಯಾಪಕವಾಗಿ ಗುರುತಿಸಲ್ಪಟ್ಟ ಭಾರತೀಯ ವಾಯುಪಡೆ (IAF) ಹೇಡಿತನದ ಪಹಲ್ಗಾಮ್ ದಾಳಿಗೆ ತಕ್ಕ ಉತ್ತರ ನೀಡಿದೆ. ಈ ವಿಚಾರದಲ್ಲಿ ನಾವು ಕೇಂದ್ರ ಸರ್ಕಾರ ಮತ್ತು ನಮ್ಮ ಭದ್ರತಾ ಪಡೆಗಳೊಂದಿಗೆ ನಿಲ್ಲುತ್ತೇವೆʼ ಎಂದು ಮತ್ತೊಂದು ಪೋಸ್ಟ್ ಹಂಚಿಕೊಂಡಿದೆ.
ಹಿಂದೂಗಳ ನರಮೇಧಕ್ಕೆ ಪ್ರತೀಕಾರವಾಗಿ ಭಾರತ ʻOperation Sindoorʼ ಹೆಸರಿನಲ್ಲಿ ಏರ್ಸ್ಟ್ರೈಕ್ ನಡೆಸಿದ್ದು, ಕೇವಲ 23 ನಿಮಿಷಗಳಲ್ಲಿ ಪಾಕ್ನ 80ಕ್ಕೂ ಹೆಚ್ಚು ಉಗ್ರರನ್ನು ಬಲಿಪಡೆಯಲಾಗಿದೆ ಎಂದು ವರದಿಯಾಗಿದೆ.
ತಡರಾತ್ರಿ 1:44 ಗಂಟೆ ವೇಳೆಗೆ ಪಾಕ್ ಉಗ್ರರ ಅಡಗುತಾಣಗಳ ಮೇಲೆ ರಫೇಲ್ ಇನ್ನಿತರ ಫೈಟರ್ಜೆಟ್ಗಳಿಂದ ದಾಳಿ ನಡೆಸಿದ ಭಾರತೀಯ ಸೇನೆ ರಾತ್ರಿ 2:07 ವೇಳೆಗೆ ಕಾರ್ಯಾಚರಣೆ ಮುಗಿಸಿದೆ. ಪಾಕಿಸ್ತಾನದಲ್ಲಿನ 9ಕ್ಕೂ ಹೆಚ್ಚು ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಲಾಗಿದೆ.