ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಲಾರಿಯೊಂದು ಬಿದ್ದಿರುವ ಘಟನೆ ನಡೆದಿದೆ.
ವರಾಹಿ ಹಿನ್ನೀರಿಗೆ ಲಾರಿ ಬಿದ್ದಿರುವ ಘಟನೆ ಹೊಸನಗರ (Hosanagar) ತಾಲೂಕಿನ ಹುಲಿಕಲ್ನಲ್ಲಿ (Hulikal) ನಡೆದಿದೆ. ರಾತ್ರಿ ತೀರ್ಥಹಳ್ಳಿಯಿಂದ (Thirthahalli) ಕುಂದಾಪುರಕ್ಕೆ ಜೋಳ ತುಂಬಿಸಿಕೊಂಡು ಲಾರಿ ತೆರಳುತ್ತಿತ್ತು. ಹುಲಿಕಲ್ ಘಾಟಿ ಬಳಿ ತೆರಳುತ್ತಿದ್ದ ಸಂದರ್ಭದಲ್ಲಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ವರಾಹಿ ನದಿಗೆ ಬಿದ್ದಿದೆ. ಆದರೆ, ಅದೃಷ್ಟವಶಾತ್ ಚಾಲಕ ಇಬ್ರಾಹಿಂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಚಾಲಕ ನಿದ್ದೆಯ ಮಂಪರಿನಲ್ಲಿ ಇದ್ದ ಹಿನ್ನೆಲೆಯಲ್ಲಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗುತ್ತಿದೆ. ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.