ಚಾಲಕನ ನಿಯಂತ್ರಣ ತಪ್ಪಿ ಕಂದಕ್ಕೆ ಲಾರಿ ಉರುಳಿರುವ ಘಟನೆ ನಡೆದಿದೆ. ಅದೃಷ್ಟವಶಾತ್ ಲಾರಿ ಚಾಲಕ, ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕೊಪ್ಪ ತಾಲೂಕಿನ ಹೆಗ್ಗಾರು ಕೂಡಿಗೆ ಬಳಿ ಈ ಘಟನೆ ನಡೆದಿದೆ. ಈ ಲಾರಿಯು ಮಂಗಳೂರಿಗೆ ಕಾಫಿ ತುಂಬಿಕೊಂಡು ಹೋಗುತ್ತಿತ್ತು. ರಸ್ತೆ ಬದಿ ಸುಮಾರು 40 ಅಡಿ ಆಳದ ಕಂದಕಕ್ಕೆ ಲಾರಿ ಉರುಳಿ ಬಿದ್ದಿದೆ. ಪರಿಣಾಮ ಲಾರಿಯಲ್ಲಿದ್ದ ಕಾಫಿ ಚೀಲಗಳು ಚೆಲ್ಲಾಪಿಲ್ಲಿಯಾಗಿವೆ. ಚಾಲಕ ಹಾಗೂ ಕ್ಲೀನರ್ ಘಟನೆಯಲ್ಲಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಸ್ಥಳಕ್ಕೆ ಜಯಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.