ಮೈಸೂರು: ಚಾಮುಂಡಿ ಬೆಟ್ಟಕ್ಕೆ ಸಚಿವ ಮಹದೇವಪ್ಪ ಭೇಟಿ ನೀಡಿದ್ದಾರೆ. ಆಷಾಢ ಶುಕ್ರವಾರದಿಂದ ಭಕ್ತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ವೇಳೆ ಚಾಮುಂಡಿ ಬೆಟ್ಟದಲ್ಲಿನ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಬಸ್ ಸ್ಡ್ಯಾಂಡ್, ವಾಹನಗಳ ಪಾರ್ಕಿಂಗ್, ದೇವರ ದರ್ಶನಕ್ಕೆ ಸರತಿ ಸಾಲು ಸೇರಿದಂತೆ ಎಲ್ಲ ರೀತಿಯ ವ್ಯವಸ್ಥೆ ಕುರಿತು ಮಾಹಿತಿ ಪಡೆದಿದ್ದಾರೆ.
ವ್ಯವಸ್ಥೆಗಳ ಬಗ್ಗೆ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿ, ಮೈಸೂರು ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಬೆಟ್ಟದ ಕಾರ್ಯದರ್ಶಿ ರೂಪ ಮಾಹಿತಿ ನೀಡಿದ್ದಾರೆ. ಬರುವ ಭಕ್ತಾದಿಗಳಿಗೆ ಅನಾನುಕೂಲ ಆಗದಂತೆ ನೋಡಿಕೊಳ್ಳಬೇಕೆಂದು ಈ ವೇಳೆ ಸೂಚಿಸಿದ್ದಾರೆ.