ಬೆಂಗಳೂರು : ಬಿಬಿಎಂಪಿ ಮುಖ್ಯ ಆಯುಕ್ತರಾಗಿ ಮಹೇಶ್ವರ್ ರಾವ್ ನೇಮಕವಾಗಿದ್ದು, ಇಂದು ಅಧಿಕಾರ ಸ್ವೀಕರಿಸಲಿದ್ದಾರೆ.
ಅಲ್ಲದೇ, ಆಡಳಿತಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಉಮಾಶಂಕರ್ ಇಂದು ಸೇವೆಯಿಂದ ನಿವೃತ್ತಿ ಹೊಂದಲಿದ್ದಾರೆ. ಉಮಾಶಂಕರ್ ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಬಿಬಿಎಂಪಿ ಆಯುಕ್ತರಾಗಿ ಕಾರ್ಯನಿರ್ವಹಿಸಿದ್ದ ತುಷಾರ್ ಗಿರಿನಾಥ್ ಹೆಚ್ಚುವರಿ ಜವಾಬ್ದಾರಿ ವಹಿಸಲಿದ್ದಾರೆ. ಇಂದು ಮಧ್ಯಾಹ್ನ 3ಕ್ಕೆ ಇಬ್ಬರೂ ಅಧಿಕಾರಿಗಳು ಕೂಡ ಅಧಿಕಾರ ಸ್ವೀಕರಿಸಲಿದ್ದಾರೆ. ಮಹೇಶ್ವರ್ ರಾವ್ ಅವರು ಬಿಎಂಆರ್ ಸಿಎಲ್ ಎಂಡಿ ಆಗಿಯೂ ಸೇವೆ ಮುಂದುವರೆಸಲಿದ್ದಾರೆ.