ಕೋಲಾರ: ಕೋಲಾರದಲ್ಲಿ ಮಾವು ಬೆಲೆ ಕುಸಿತವಾಗಿರುವ ಹಿನ್ನೆಲೆಯಲ್ಲಿ ಮಾವು ಬೆಳೆಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾವು ಬೆಳೆಗಾರರ ಸಂಘದ ಜಿಲ್ಲಾಧ್ಯಕ್ಷ್ಯ ಚಿನ್ನಪ್ಪರೆಡ್ಡಿ, ರಾಜ್ಯ ಸರ್ಕಾರ ಮಾವು ಬೆಳೆಗಾರರಿಗೆ ಅಸಹಕಾರ ನೀಡುತ್ತಿದೆ.
ಬೆಂಬಲ ಬೆಲೆ ಘೋಷಣೆ ಮಾಡುವ ರಾಜ್ಯ ಸರ್ಕಾರದ ಭರವಸೆ ಹುಸಿಯಾಗಿದೆ. ಉಸ್ತುವಾರಿ ಸಚಿವ ಭೈರತಿ ಸುರೇಶ್ ಅವರ ಮನೆಗೆ ತೆರಳಿ, ಮನವಿ ಮಾಡಿದ್ದೆವು. ಆದರೆ, ಸಿಎಂ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವ ಅಗತ್ಯವೇ ಇರಲಿಲ್ಲ. ಸರ್ಕಾರವೇ ಬೆಂಬಲ ಬೆಲೆ ಘೋಷಿಸಬೇಕು ಎಂದಿದ್ದಾರೆ.
ಈ ಹಿನ್ನೆಲೆಯಲ್ಲಿ ಮಾವು ಬೆಳೆಗೆ ಬೆಂಬಲ ಘೋಷಿಸಬೇಕೆಂದು ಆಗ್ರಹಿಸಿ ನಾಳೆಯಿಂದಲೇ ಉಗ್ರ ಹೋರಾಟ ನಡೆಸಲಾಗುವುದು. ರಾಜ್ಯ ಸರ್ಕಾರಕ್ಕ ಯಾವುದೇ ಮಾಹಿತಿ ನೀಡದೆ ಉಗ್ರ ಹೋರಾಟ ಮಾಡುತ್ತೇವೆ ಎಂದಿದ್ದಾರೆ.