ಬೆಂಗಳೂರು: ನಗರದಲ್ಲಿ ಭೀಕರ ಬೆಂಕಿ (Fire Accident) ಅವಘಡ ಸಂಭವಿಸಿದೆ. ಸುಮಾರು 40ಕ್ಕೂ ಅಧಿಕ ಶೆಡ್ ಗಳು ಬೆಂಕಿಗೆ ಆಹುತಿಯಾಗಿವೆ.
ಬೆಂಗಳೂರಿನ ವೀರನಪಾಳ್ಯ(Veerannapalya) ದಲ್ಲಿನ ಮುಖ್ಯ ರಸ್ತೆಯ ಖಾಸಗಿ ಶಾಲೆ ಪಕ್ಕದಲ್ಲಿ ಈ ಘಟನೆ ನಡೆದಿದೆ. ಇಲ್ಲಿ ಕೂಲಿ ಕಾರ್ಮಿಕರು ಶೆಡ್ ಗಳನ್ನು ನಿರ್ಮಿಸಿಕೊಂಡಿದ್ದರು. ಸುಮಾರು 50ಕ್ಕೂ ಅಧಿಕ ಶೆಡ್ ಗಳು ಇಲ್ಲಿ ನಿರ್ಮಾಣಗೊಂಡಿದ್ದವು. ಒಂದು ಶೆಡ್ ನಲ್ಲಿ ಕಾಣಿಸಿಕೊಂಡಿದ್ದ ಬೆಂಕಿ ಆನಂತರ ನೋಡ ನೋಡುತ್ತಿದ್ದಂತೆ ಎಲ್ಲ ಶೆಡ್ ಗಳಿಗೂ ಆವರಿಸಿದೆ.
ಬೆಂಕಿ ಕಾಣುತ್ತಿದ್ದಂತೆ ಕೂಲಿ ಕಾರ್ಮಿಕರು ಹೊರಗೆ ಓಡಿ ಬಂದಿದ್ದಾರೆ. ಕೂಲೇ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ತೆರಳಿ ಬೆಂಕಿ ನಂದಿಸಿದ್ದಾರೆ. ಗೋವಿಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.