ಬೆಂಗಳೂರು: ಮೆಟ್ರೋ ನಿಲ್ದಾಣಗಳಲ್ಲಿ ಅಮುಲ್ ಉತ್ಪನ್ನ ಮಳಿಗೆ ಹಾಕುವುದಕ್ಕೆ ಒಪ್ಪಿಗೆ ಸೂಚಿಸಿರುವ ಹಿನ್ನೆಲೆಯಲ್ಲಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.
ನಮ್ಮದೇ ಕೆಎಂಎಫ್ ನಂದಿನಿ ಇರುವಾಗ ಅಮುಲ್ಗೆ ಏಕೆ ಅವಕಾಶ ನೀಡಬೇಕು. ಕೆಎಂಎಫ್ ಮಳಿಗೆ ಬಿಟ್ಟು ಗುಜರಾತ್ ಹಾಲು ಮಾರಾಟ ಒಕ್ಕೂಟದ ಜೊತೆಗೆ ಒಪ್ಪಂದ ಮಾಡಿಕೊಂಡಿದ್ದೇಕೆ? ಎಂದು ಪ್ರಶ್ನಿಸಿದ್ದಾರೆ.
ಗಳೂರಿನ ಪ್ರಮುಖ 10 ನಿಲ್ದಾಣಗಳಲ್ಲಿ ಅಮುಲ್ ಕಿಯೋಸ್ಟ್ ಮಳಿಗೆ ತೆರೆಯಲು ಪ್ಲಾನ್ ಮಾಡಿದ್ದು, ಗುಜರಾತ್ ಕೋ-ಆಪರೇಟಿವ್ ಮಿಲ್ಕ್ ಮಾರ್ಕೆಟಿಂಗ್ ಫೆಡರೇಷನ್ ಲಿ. ಜೊತೆಗೆ BMRCL ಒಪ್ಪಂದ ಮಾಡಿಕೊಂಡಿದೆ.
ಒಪ್ಪಂದದಂತೆ ಬೆಂಗಳೂರಿನ ಪಟ್ಟಂದೂರು ಅಗ್ರಹಾರ, ಇಂದಿರಾನಗರ, ಬೆನ್ನಿಗಾನಹಳ್ಳಿ, ಬೈಯಪ್ಪನಹಳ್ಳಿ, ಟ್ರಿನಿಟಿ, ಸರ್ ಎಂ.ವಿಶ್ವೇಶ್ವರಯ್ಯ, ಮೆಜೆಸ್ಟಿಕ್. ನ್ಯಾಷನಲ್ ಕಾಲೇಜು, ಜಯನಗರ ಹಾಗೂ ನಿಲ್ದಾಣದಲ್ಲಿ ಅಮುಲ್ ಮಳಿಗೆ ಹಾಕಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಒಂದು ವೇಳೆ ಈ ಪ್ರದೇಶದಲ್ಲಿ ಅಮುಲ್ ಮಳಿಗೆ ಸ್ಥಾಪಿಸಿದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಕನ್ನಡಿಗರು ಹಾಗೂ ಕನ್ನಡಪರ ಹೋರಾಟಗಾರರು ಎಚ್ಚರಿಕೆ ನೀಡಿದ್ದಾರೆ.