ಬೆಂಗಳೂರು : ತಿಮ್ಮಾಪುರ ಅವರು ಬಾಗಲಕೋಟೆಯಲ್ಲಿ ಕುಳಿತು ಈ ರೀತಿ ಮಾತನಾಡುವುದು ಸರಿಯಲ್ಲ. ದಾಳಿ ನಡೆದ ಸ್ಥಳದಲ್ಲಿ ತಿಮ್ಮಾಪುರ ಅವರು ಹೋಗಬೇಕಿತ್ತು. ಆಗ ಗೊತ್ತಾಗುತ್ತಿತ್ತು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮಾತನಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ರೀತಿ ಮಾತಾನಾಡುತ್ತಿರುವುದಕ್ಕೆ ಅವರು ಇಂತಹ ಸರ್ಕಾರದಲ್ಲಿ ಸಚಿವರಾಗಿರುವುದು. ಜನರ ಮನಸ್ಸನ್ನು ವಿಷಯಾಂತರ ಮಾಡುವ ಉದ್ದೇಶದಿಂದಲೇ ಇದೀಗ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದಾರೆ. ಕಾಂಗ್ರೆಸ್ ನವರಿಗೆ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುವುದಕ್ಕೆ ಯಾವುದೇ ನೇತಿಕತೆ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ನೆಹರು ಮಾಡಿದ ತಪ್ಪಿಗೆ, ದೇಶ ಈ ಸ್ಥಿತಿ ತಲುಪಿದೆ
ಸಿಂಧೂ ನದಿ ವಿಚಾರವಾಗಿ ಮಾತನಾಡಿದ ಜಗದೀಶ್ ಶೆಟ್ಟರ್, ಜವಾಹರಲಾಲ್ ನೆಹರೂ ಮಾಡಿದ ತಪ್ಪಿನಿಂದಾಗಿ ಇಂದು ದೇಶ ಕಷ್ಟ ಅನುಭವಿಸುತ್ತಿದೆ. ಸಿಂಧೂ ನದಿ ವಿಚಾರವಾಗಿ ನೆಹರೂ ಮಾಡಿದ ತಪ್ಪನ್ನ ಇಂದು ಮೋದಿ ಸರಿ ಮಾಡುತ್ತಿದ್ದಾರೆ. ಹೀಗಾಗಿ ಕಾಂಗ್ರೆಸ್ ನವರಿಗೆ ಮೋದಿ ವಿರುದ್ಧ ಮಾತನಾಡುವ ಯಾವುದೇ ನೈತಿಕ ಹಕ್ಕು ಇಲ್ಲ ಎಂದು ಹುಬ್ಬಳ್ಳಿಯಲ್ಲಿ ಜಗದೀಶ್ ಶೆಟ್ಟರ್ ಹೇಳಿಕೆ ನೀಡಿದ್ದಾರೆ.