ಹುಬ್ಬಳ್ಳಿ: ಬೆಳ್ಳಂಬೆಳಿಗ್ಗೆ ಸಚಿವ ಸಂತೋಷ್ ಲಾಡ್ ಹಾಗೂ ಅಧಿಕಾರಿಗಳು ರಸ್ತೆಗಿಳಿದು ಸ್ವಚ್ಛತಾ ಕಾರ್ಯ ಕೈಗೊಂಡಿದ್ದಾರೆ.
ವಿಶೇಷ ಸ್ವಚ್ಛತಾ ಅಭಿಯಾನದ ಹಿನ್ನೆಲೆಯಲ್ಲಿ ಇಂದು ಸಚಿವ ಸಂತೋಷ್ ಲಾಡ್ ಸ್ವತಃ ರಸ್ತೆಗೆ ಇಳಿದು ನೂರಾರು ಪೌರಕಾರ್ಮಿಕರೊಂದಿಗೆ ಸೇರಿ ಸ್ವಚ್ಛಗೊಳಿಸಿದ್ದಾರೆ.
ನಗರದ ಸಿದ್ಧಾರೂಢ ಮಠ, ಆನಂದ ನಗರ ಸರ್ಕಲ್ ಸೇರಿದಂತೆ ಮತ್ತಿತರ ಕಡೆ ಸ್ವಚ್ಛತಾ ಕಾರ್ಯ ನಡೆಸಿದ್ದಾರೆ. ಲಾಡ್ ಗೆ ಶಾಸಕ ಪ್ರಸಾದ ಅಬ್ಬಯ್ಯ, ಜಿಲ್ಲಾಧಿಕಾರಿ ದಿವ್ಯ ಪ್ರಭು, ಪಾಲಿಕೆ ಆಯುಕ್ತ ರುದ್ರೇಶ ಘಾಳಿ ಸೇರಿದಂತೆ ಹಲವರು ಇದ್ದರು.
ಈ ವೇಳೆ ಪಾಲಿಕೆ ಅಧಿಕಾರಿಗಳಿಗೆ ಲಾಡ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಸ್ವಚ್ಛತೆ ಕಾಪಾಡುವಂತೆ ಕಿವಿ ಮಾತು ಹೇಳಿದ್ದಾರೆ.