ಬೆಂಗಳೂರು ಗ್ರಾಮಾಂತರ: ಅನುಮಾನಾಸ್ಪದ ರೀತಿಯಲ್ಲಿ ಕೃಷಿ ಹೊಂಡದಲ್ಲಿ ತಾಯಿ-ಮಗಳ ಶಪ ಪತ್ತೆಯಾಗಿರುವ ಘಟನೆ ನಡೆದಿದೆ.
ಜಮೀನು ವಿಭಾಗ ಮಾಡಿ ಅಂತಾ ಕೇಳಿದ್ದಕ್ಕೆ ಗಂಡನೇ ಹೆಂಡತಿ, ಮಗಳನ್ನು ಕೊಲೆ ಮಾಡಿರಬಹುದು ಎಂಬ ಆರೋಪ ಕೇಳಿ ಬಂದಿದೆ. ದೇವನಹಳ್ಳಿ ತಾಲೂಕಿನ ಇಂಡ್ರಸನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಮಾಲ(30), ಮಗಳು ಅನುಶ್ರೀ (8) ಎಂಬುವವರ ಶವ ಪತ್ತೆಯಾಗಿದೆ.
ಕೊಲೆ ಮಾಡಿ ಕೃಷಿ ಹೊಂಡದೊಳಗೆ ತಳ್ಳಿರುವ ಆರೋಪ ಕೇಳಿ ಬಂದಿದೆ. ಗಂಡ ನಾಗರಾಜ್, ಮೈದುನ ಮುನಿರಾಜ್, ಅತ್ತೆ ಆಂಜಿನಮ್ಮಾ ಹಾಗೂ ನಾದಿನಿ ಶಿಲ್ಪಾ ಕೊಲೆ ಮಾಡಿದ್ದಾರೆಂದು ಮೃತ ಮಾಲಾ ತಂದೆ, ತಾಯಿ ಹಾಗೂ ಸಂಬಂಧಿಕರು ಆರೋಪಿಸಿದ್ದಾರೆ. ಮನೆಯ ಮುಂದೆಯೇ ಅಂತ್ಯ ಸಂಸ್ಕಾರಕ್ಕೆ ಮಾಲಾ ಸಂಬಂಧಿಕರು ಒತ್ತಾಯಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಶ್ವನಾಥಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.