ರಾಯಚೂರು: ಕೊಲೆ ಪ್ರಕರಣವೊಂದರ 9 ಜನ ಆರೋಪಿಗಳಿಗೆ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ. 2020ರಲ್ಲಿ ರಾಯಚೂರು (Raichur) ಜಿಲ್ಲೆಯಲ್ಲಿ ನಡೆದಿದ್ದ ಕೊಲೆ ಸಿಂಧನೂರಿನ ಸುಕಾಲಪೇಟೆಯಲ್ಲಿ ನಡೆದ ಐವರ ಕೊಲೆ ಪ್ರಕರಣದ (Sindhanur Murder Case) ತೀರ್ಪು ಪ್ರಕಟವಾಗಿದೆ.
ಐವರ ಕೊಲೆ ಹಾಗೂ ಇಬ್ಬರ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಮರಣದಂಡನೆ, 9 ಜನರಿಗೆ ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿ ಸಿಂಧನೂರಿನ 3ನೇ ಅಧಿಕ ಜಿಲ್ಲಾ ಮತ್ತು ಸೆಷನ್ ಕೋರ್ಟ್ (Sindhanur District and Sessions Court) ತೀರ್ಪು ನೀಡಿದೆ.
ಪ್ರೇಮ ಪ್ರಕರಣ (Love Case)ವೇ ಈ ಗಲಾಟೆಗೆ ಕಾರಣವಾಗಿತ್ತು. 1ನೇ ಆರೋಪಿ ಸಣ್ಣಫಕೀರಪ್ಪನ ಮಗಳು ಪ್ರೀತಿಸಿ ಮದುವೆಯಾಗಿದ್ದಕ್ಕೆ ಹುಡುಗನ ಮನೆಯವರ ಮೇಲೆ ಹಲ್ಲೆ ನಡೆಸಿ ನಡುರಸ್ತೆಯಲ್ಲಿ ಕೊಲೆ ಮಾಡಲಾಗಿತ್ತು. ಈ ಕುರಿತು ಸಿಂಧನೂರು ನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ 12 ಜನ ಆರೋಪಿಗಳಿಗೆ ಶಿಕ್ಷೆ ಪ್ರಕಟವಾಗಿದೆ.