ರಾಯಚೂರು : ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಫುಲ್ ಆಕ್ಟೀವ್ ಆಗಿದ್ದಾರೆ. ರಾಜ್ಯ ಪ್ರವಾಸದಲ್ಲಿರುವ ಅವರು ರಾಯಚೂರು ನಗರದಲ್ಲಿ ಬೈಕ್ ರ್ಯಾಲಿ ನಡೆಸಿದ್ದಾರೆ.
ನಗರದ ಅಂಬೇಡ್ಕರ್ ವೃತ್ತದಲ್ಲಿ ಪುತ್ತಳಿಗೆ ಮಾಲಾರ್ಪಣೆ ಮಾಡಿ, ಪಟೇಲ್ ವೃತ್ತದಲ್ಲಿನ ಸರ್ಧಾರ್ ವಲ್ಲಭಾಯಿ ಪಟೇಲ್ ಪುತ್ತಳಿಗೆ ಮಾಲಾರ್ಪಣೆ ಮಾಡಿದರು. ಬಳಿಕ ಜೆಡಿಎಸ್ ಕಾರ್ಯಕರ್ತರಿಂದ ಕೃಷಿ ವಿವಿ ಮೂಲಕ ನಗರದ ಪ್ರಮುಖ ಬೀದಿಗಳಲ್ಲಿ ಬೈಕ್ ರ್ಯಾಲಿ ನಡೆಸಿದರು.
ಇಂದು ದೇವದುರ್ಗ ಪಟ್ಟಣದಲ್ಲಿ ಪುತ್ತಳಿ ಅನಾವರಣ ಕಾರ್ಯಕ್ರಮ ನಡೆಸಲಾಗುತ್ತಿದ್ದು, ನೂರಾರು ಬೈಕ್ ಗಳ ಮೂಲಕ ಜೆಡಿಎಸ್ ಯುವ ಮುಖಂಡನನ್ನು ಕಾರ್ಯಕರ್ತರು ಸ್ವಾಗತಿಸಿದರು. ಈ ವೇಳೆ ಮಾತನಾಡಿದ ಅವರು ರಾಜ್ಯ ಸರಕಾರ ತನಗೆ ತಾನು, ಆತ್ಮಸಾಕ್ಷಿಯಾಗಿ ಆತ್ಮಾವಲೋಕನ ಮಾಡಿಕೊಳ್ಳಲಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಯುವನಿಧಿ ಸೇರಿ ಗ್ಯಾರೆಂಟಿಗಳ ಬಗ್ಗೆ ಪ್ರಣಾಳಿಕೆಯಲ್ಲಿ ಮಾತು ಕೊಟ್ಟಂತೆ ನಡೆದುಕೊಳ್ಳುತ್ತಿಲ್ಲ.
ಗ್ಯಾರಂಟಿ ಯೋಜನೆಗಳ ಬಗ್ಗೆ ತಿಂಗಳು ತಿಂಗಳು ಖಾತೆಗೆ ಜಮೆ ಮಾಡುತ್ತೇವೆ ಅಂದಿದ್ದರು. ಇತ್ತೀಚೆಗೆ ಡಿಸಿಎಂ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತ, ನಾವೇನು ತಿಂಗಳ..ತಿಂಗಳ ಕೊಡ್ತೀವಿ ಅಂದಿದ್ದೇವಾ ಎಂದು ಪ್ರಶ್ನಿಸಿದ್ರು. ಆದರೆ, ಎಂಪಿ ಚುನಾವಣೆ ವೇಳೆ ಬಾಕಿ ಹಣ ಹಾಕಿದ್ದಾರೆ. ಇದನ್ನು ನೋಡಿದರೆ ZP, TP ಚುನಾವಣೆ ಬರೋವರೆಗೂ ಕಾಯ್ಬೇಕೆನೋ ಎಂದು ವಂಗ್ಯವಾಡಿದ್ದಾರೆ.