ಬೆಂಗಳೂರಿನ ನಮ್ಮ ಕ್ಲಿನಿಕ್ ಗಳಿಗೆ ಕಾಂಗ್ರೆಸ್ ಸರ್ಕಾರ ಕೊಳ್ಳೆ ಇಡಲು ಮುಂದಾಗಿದೆ ಎಂಬ ಆರೋಪ ಕೇಳಿ ಬಂದಿದೆ.
ಬಿಜೆಪಿ ಸರ್ಕಾರದ ಕನಸಿನ ಕೂಸಿಗೆ ಕೊಳ್ಳಿ ಇಡಲು ಕಾಂಗ್ರೆಸ್ ತಂತ್ರ ಹೆಣೆಯುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ನಮ್ಮ ಕ್ಲಿನಿಕ್ ಓಪನ್ ಆದಾಗಿನಿಂದ ಒಂದಿಲ್ಲೊಂದು ಸಂಕಷ್ಟ ಎದುರಾಗುತ್ತಿದೆ. ಇದೀಗ ಮತ್ತೊಂದು ತೊಂದರೆಗೆ ನಮ್ಮ ಕ್ಲಿನಿಕ್ ಸಿಲುಕುವಂತಾಗಿದೆ. ಇದನ್ನು ಗಮನಿಸಿದರೆ ನಮ್ಮ ಕ್ಲಿನಿಕ್ ನಡೆಸಲು ಸರ್ಕಾಕ್ಕೆ ಇಷ್ಟ ಇಲ್ವಾ? ಅಥವಾ ಕ್ಲಿನಿಕ್ ನಡೆಸುವುದಕ್ಕೆ ಸರ್ಕಾರದ ಬಳಿ ಅನುದಾನ ಇಲ್ವಾ? ಎಂಬ ಸಂಶಯ ವ್ಯಕ್ತವಾಗುತ್ತಿದೆ. ನಗರದಲ್ಲಿ ಒಟ್ಟು 140ಕ್ಕೂ ಅಧಿಕ ಕ್ಲಿನಿಕ್ ಗಳಿವೆ. ನಮ್ಮ ಕ್ಲಿನಿಕ್ ನಲ್ಲಿ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಸಿಬ್ಬಂದಿಗಳು ಕೆಲಸ ಮಾಡುತ್ತಿದ್ದಾರೆ. ಬಡವರಿಗೆ, ಕೂಲಿ ಕಾರ್ಮಿಕರಿಗೆ ಉಚಿತ ಚಿಕಿತ್ಸೆ ನೀಡುವುದಕ್ಕೆ ಅಂತಾ ನಮ್ಮ ಕ್ಲಿನಿಕ್ ಓಪನ್ ಮಾಡಲಾಗಿದೆ.
ಆದರೆ, ಓಪನ್ ಆದಾಗಿನಿಂದ ಒಂದಲ್ಲ ಒಂದು ವಿಘ್ನ ಎದುರಾಗುತ್ತಲೇ ಇದೆ. ಈಗ ನಮ್ಮ ಕ್ಲಿನಿಕ್ ಗೆ ಮತ್ತೊಂದು ವಿಘ್ನ ಎದುರಾಗಿದೆ. ನಮ್ಮ ಕ್ಲಿನಿಕ್ ಸಿಬ್ಬಂದಿಗಳಿಗೆ ಕಳೆದ ಮೂರು ತಿಂಗಳಿಂದ ವೇತನ ಸಿಕ್ಕಿಲ್ಲ ಎನ್ನಲಾಗಿದೆ. ಹೀಗಾಗಿ ಸಿಬ್ಬಂದಿಗೆ ಸಂಬಳ ಇಲ್ಲದ ಜೀವನ ಸಾಗಿಸಲು ಕಷ್ಟವಾಗುತ್ತಿದೆ. ಈ ತಿಂಗಳ ಅಂತ್ಯದ ಒಳಗೆ ವೇತನ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ. ಒಂದು ವೇಳೆ ಸಂಬಳ ಕೊಡದಿದ್ದರೆ ಕ್ಲಿನಿಕ್ ಓಪನ್ ಮಾಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಸಂಬಳ ನೀಡದಿದ್ದರೆ ಕ್ಲಿನಿಕ್ ಓಪನ್ ಮಾಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಗ್ಯಾರಂಟಿ ಯೋಜನೆಯಿಂದಾಗಿ ಸರ್ಕಾರದ ಬಳಿ ಹಣದ ಅಡಚಣೆ ಉಂಟಾಗಿ ನಮ್ಮ ಕ್ಲಿನಿಕ್ ಬಂದ್ ಮಾಡುವ ಸ್ಥಿತಿ ಬಂದಿದೆಯಾ? ಬಿಜೆಪಿ ಸರ್ಕಾರದ ಅವಧಿಯಲ್ಲಿ ಇಂದಿರಾ ಕ್ಯಾಂಟೀನ್ ಬಂದ್ ಮಾಡಲು ಮುಂದಾಗಿತ್ತು. ಹೀಗಾಗಿ ಕಮಲಪಡೆಯ ಪ್ಲಾನ್ ಗೆ ಈಗ ಈ ರೀತಿ ಠಕ್ಕರ್ ಕೊಡಲು ಕಾಂಗ್ರೆಸ್ ಈ ರೀತಿ ಮಾಡುತ್ತಿದೆಯಾ? ಎಂಬ ಆರೋಪ ಕೂಡ ಈಗ ಕೇಳಿ ಬರುತ್ತಿದೆ.