ನವದೆಹಲಿ:ಭಾರತ ಹಾಗೂ ಪಾಕಿಸ್ತಾನ ಗಡಿಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಭಾರತದ ದಾಳಿಗೆ ಬೆಚ್ಚಿ ಬಿದ್ದಿರುವ ಪಾಕಿಸ್ತಾನ ಕದನ ವಿರಾಮಕ್ಕೆ ಮುಂದಾಗಿ ಈಗ ಪಾಲಿಸಲು ಮುಂದಾಗಿದೆ.
ಈ ಮೂಲಕ ಭೂ, ಜಲ, ವಾಯು ಸೇರಿದಂತೆ ಎಲ್ಲ ರೀತಿಯ ಮಿಲಿಟರಿ ಕಾರ್ಯಾಚರಣೆಗಳನ್ನು ನಿಲ್ಲಿಸಲು ಭಾರತ ಹಾಗೂ ಪಾಕಿಸ್ತಾನ ಮುಂದಾಗಿವೆ. ಭಾರತ ಹಾಗೂ ಪಾಕಿಸ್ತಾನಗಳ ಮಧ್ಯೆ ಯುದ್ಧ ಭೀತಿ ಆವರಿಸಿತ್ತು. ಆದರೆ, ಇಂದು ಸಂಜೆ ಎರಡೂ ರಾಷ್ಟ್ರಗಳು ಕದನ ವಿರಾಮಕ್ಕೆ ಮುಂದಾಗಿವೆ. ಸಂಜೆ 5 ಗಂಟೆಯಿಂದಲೇ ಎಲ್ಲಾ ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸಲಾಗಿದೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಎಕ್ಸ್ ಖಾತೆಯಲ್ಲಿ, ಭಾರತ ಮತ್ತು ಪಾಕ್ ನಡುವಿನ ಸಂಧಾನದ ಬಗ್ಗೆ ಮಾಹಿತಿ ನೀಡಿದರು. ಸ್ವಲ್ಪ ಸಮಯದ ನಂತರ ಭಾರತವು ಕದನ ವಿರಾಮವನ್ನು ದೃಢವಾಗಿದೆ.