ಮೈಸೂರು ಜಿಲ್ಲೆಯಲ್ಲಿ ಹುಚ್ಚು ನಾಯಿ ಹಾವಳಿ ಮೇರೆ ಮೀರಿದೆ. ನಂಜನಗೂಡಿನ ಹುಲ್ಲಹಳ್ಳಿಯಲ್ಲಿ ಎರಡು ಹುಚ್ಚುನಾಯಿಗಳು ವಕ್ಕರಿಸಿಕೊಂಡಿದ್ದು, ಪುಟಾಣಿ ಮಕ್ಕಳ ಮೇಲೆ ಕ್ರೌರ್ಯ ಮೆರೆದಿವೆ.
ಗ್ರಾಮದ 20ಕ್ಕೂ ಹೆಚ್ಚು ಮಕ್ಕಳ ಮೇಲೆ ಹುಚ್ಚು ನಾಯಿಗಳು ದಾಳಿ ಮಾಡಿದ್ದು, ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ. ಇನ್ನು ಗಾಯಾಳು ಮಕ್ಕಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದ್ರೂ, ಸೂಕ್ತ ಚುಚ್ಚು ಮದ್ದಿನ ಲಭ್ಯತೆ ಅರ್ಲಿಲ್ಲ. ಹೀಗಾಗಿ ಅನಿವಾರ್ಯವಾಗಿ, ಪೋಷಕರು ತಮ್ಮ ಮಕ್ಕಳನ್ನ ನಗರದ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ. ಈ ಕೂಡಲೇ ಸಂಬಂಧಪಟ್ಟವರು ಈ ಬಗ್ಗೆ ಗಮನ ಹರಿಸಿ ಕ್ರಮ ಕೈಗೊಳ್ಳಬೇಕು ಅಂತಾ ಗ್ರಾಮಸ್ಥರು ಆಗ್ರಹಿಸಿದ್ದಾರೆ.