ಆಂಧ್ರಪ್ರದೇಶ ಡಿಸಿಎಂ ಹಾಗೂ ನಟ ಪವನ್ ಕಲ್ಯಾಣ್ ಪುತ್ರ ಅಗ್ನಿ ಅವಘಡಕ್ಕೆ ಸಿಲುಕಿದ ಸುದ್ದಿ ಹೊರ ಬಿದ್ದಿತ್ತು. ಆದರೆ, ಅದೃಷ್ಟವಶಾತ್ ಆ ಮಗು ಪ್ರಾಣಾಪಾಯದಿಂದ ಪಾರಾಗಿದ್ದು, ಈಗ ಪವನ್ ಕಲ್ಯಾಣ್ ಪತ್ನಿ ತಿರುಪತಿಯಲ್ಲಿ ಮುಡಿ ಕೊಟ್ಟಿದ್ದಾರೆ.
ಪವನ್ ಕಲ್ಯಾಣ್ ಪತ್ನಿ ಅನ್ನಾ ಲೆಜ್ನೆವಾ (Anna Lezhneva) ಅವರು ತಿರುಪತಿಯಲ್ಲಿ ಮುಡಿಕೊಟ್ಟಿದ್ದಾರೆ. ಪುತ್ರ ಮಾರ್ಕ್ ಶಂಕರ್ (Mark Shankar) ಸಿಂಗಾಪುರದಲ್ಲಿ ಅಗ್ನಿ ಅವಘಡದಿಂದ ಪಾರಾಗಿದ್ದ. ಬೆಂಕಿ ಅವಘಡದಲ್ಲಿ ಸಿಲುಕಿದ್ದ ಶಂಕರ್ ಈಗ ಚೇತರಿಸಿಕೊಳ್ಳುತ್ತಿದ್ದಾನೆ. ಸದ್ಯ ಮಗ ಹಾಗೂ ತಾಯಿ ಭಾರತಕ್ಕೆ ಬಂದಿದ್ದಾರೆ. ಈಗ ಪವನ್ ಕಲ್ಯಾಣ್ ಪತ್ನಿ (Pawan Kalyan Wife) ಅನ್ನಾ ಲೆಜ್ನೆವಾ ಅವರು ತಿರುಪತಿಯಲ್ಲಿ ಮುಡಿ ಕೊಟ್ಟಿದ್ದಾರೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.