ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಹಾಲಹಳ್ಳಿ ಬಳಿ ಹುಲಿ ಪ್ರತ್ಯಕ್ಷವಾಗಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ.
ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಹಾಲಹಳ್ಳಿ ಅಣೆಕಟ್ಟು ಬಳಿ ಹುಲಿ ಕಾಣಿಸಿಕೊಂಡಿದೆ. ಹುಲಿ ಘರ್ಜನೆ ಕೇಳಿ ಜನರು ಭಯಭೀತರಾಗಿದ್ದಾರೆ.
ಇತ್ತೀಚೆಗಷ್ಟೇ ಸೋಮಹಳ್ಳಿ ಬಳಿ ಹುಲಿ ಕಾಣಿಸಿಕೊಂಡಿತ್ತು. ಹೀಗಾಗಿ ರೈತರು ಹೊಲ-ಗದ್ದೆಗಳಿಗೆ ಹೋಗಲು ಭಯ ಪಡುತ್ತಿದ್ದಾರೆ. ಈ ಮಧ್ಯೆ ಹುಲಿಯ ಘರ್ಷನೆ ಕೇಳಿ ಜನರು ಅದನ್ನು ಸೆರೆ ಹಿಡಿಯುವಂತೆ ಆಗ್ರಹಿಸುತ್ತಿದ್ದಾರೆ.