ಭಾರತ-ಪಾಕಿಸ್ತಾನ ನಡುವೆ ಯುದ್ಧ ಆರಂಭದ ಬೆನ್ನಲ್ಲೇ ಪ್ರಧಾನಿ ಮೋದಿ ಅಖಾಡಕ್ಕಿಳಿದಿದ್ದಾರೆ. ಗಡಿ ರಾಜ್ಯಗಳ ಸಿಎಂಗಳ ಜೊತೆ ಮೋದಿ ಮಹತ್ವದ ಚರ್ಚೆ ನಡೆಸಿದ್ದಾರೆ.
ರಾಜಸ್ಥಾನ, ಪಂಜಾಬ್ ಮತ್ತು ಗುಜರಾತ್ ಸಿಎಂಗಳಿಗೆ ಕರೆ ಮಾಡಿರುವ ಮೋದಿ ಭದ್ರತಾ ವ್ಯವಸ್ಥೆಗಳ ಬಗ್ಗೆ ಚರ್ಚಿಸಿದ್ದಾರೆ. ರಾಜ್ಯಗಳ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸುವಂತೆ ಸೂಚಿಸಿರುವ ಪ್ರಧಾನಿ, ಮುಂದಿನ ಕಾರ್ಯ ವಿಧಾನಗಳ ಬಗ್ಗೆ ಸಮಾಲೋಚಿಸಿದ್ದಾರೆ. ಪಾಕಿಸ್ತಾನದೊಟ್ಟಿಗೆ ಗಡಿ ಹಂಚಿಕೊಂಡಿರುವ ಈ ಮೂರು ರಾಜ್ಯಗಳೇ ಪಾಕ್ ನ ಪ್ರಮುಖ ಟಾರ್ಗೆಟ್ ಆಗಬಹುದಾದ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮಗಳ ಬಗ್ಗೆ ಮೋದಿ ಕೆಲ ಸಲಹೆಗಳನ್ನು ನೀಡಿದ್ದಾರೆ.
ಇನ್ನೊಂದೆಡೆ ಆರೋಗ್ಯ ಸಚಿವ ಜೆಪಿ ನಡ್ಡಾ ಕೂಡಾ ಮಹತ್ವದ ಸಭೆ ನಡೆಸಿದ್ದು, ಅಗತ್ಯಕ್ಕನುಸಾರ ಔಷಧಿ ಸೇರಿ ವೈದ್ಯಕೀಯ ಸೇವೆಗಳನ್ನು ಹೈಅಲರ್ಟ್ ನಲ್ಲಿರುವಂತೆ ಸೂಚಿಸಿದ್ದಾರೆ. ಆರೋಗ್ಯ ಇಲಾಖೆ ಹಿರಿಯಾಧಿಕಾರಿಗಳೊಟ್ಟಿಗೆ ಚರ್ಚಿಸಿದ ನಡ್ಡಾ, ಗಡಿ ಜಿಲ್ಲೆಗಳಲ್ಲಿ ತುರ್ತು ಸೇವೆಗೆ ಅಗತ್ಯವಿರುವ ವೈದ್ಯಕೀಯ ಸವಲತ್ತುಗಳನ್ನು ಸಜ್ಜಾಗಿಡುವಂತೆ ಸೂಚಿಸಿದ್ದಾರೆ.