ಕಲಬುರಗಿ: ಜಮ್ಮು- ಕಾಶ್ಮೀರದ ಪಹಲ್ಗಾಮ್ನಲ್ಲಿ ಭಯೋತ್ಪಾದಕರ ದಾಳಿ ವಿಚಾರವಾಗಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಕಂಬನಿ ಮಿಡಿದಿದ್ದಾರೆ.

ದಾಳಿಯಲ್ಲಿ ಶಿವಮೊಗ್ಗ ಜಿಲ್ಲೆಯ ಮಂಜುನಾಥ್ ಸಾವನ್ನಪ್ಪಿದ್ದು, ಹಲವು ಪ್ರವಾಸಿಗರು ಗಾಯಗೊಂಡಿರುವ ವಿಷಯ ತಿಳಿದು ಅತೀವ ದುಃಖವಾಯಿತು. ಕಾಶ್ಮೀರದಲ್ಲಿ ಸಿಲುಕಿರುವ ಕರ್ನಾಟಕದ ಪ್ರವಾಸಿಗರ ರಕ್ಷಣೆಗೆ ಈಗಾಗಲೇ ಸಿಎಂ ನಿರ್ದೇಶನ ನೀಡಿದ್ದಾರೆ. ಅವರಿಗೆ ನೆರವಾಗಲು ಅಧಿಕಾರಿಗಳ ತಂಡವನ್ನು ಸ್ಥಳಕ್ಕೆ ಕಳುಹಿಸುವ ವ್ಯವಸ್ಥೆ ಮಾಡಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬ ವರ್ಗದವರಿಗೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಆಶಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.