ಹಾವೇರಿ: ಹಾವೇರಿಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಯುವತಿ ಬಲಿಯಾಗಿದ್ದಾರೆ ಎಂದು ಆರೋಪಿಸಿ ಆಸ್ಪತ್ರೆ ಎದುರು ಯುವತಿಯ ಕುಟುಂಬಸ್ಥರ ಪ್ರತಿಭಟನೆ ನಡೆಸಿದ್ದಾರೆ.
ಚಿರಾಯು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬಂದಿದ್ದ ಬ್ಯಾಡಗಿ ತಾಲೂಕಿನ ಹೆಡಿಗೊಂಡ ಗ್ರಾಮದ ನಿವಾಸಿ ಯುವತಿ ವಂದನಾ(18) ಸಾವನ್ನಪ್ಪಿರುವ ದುರ್ದೈವಿ. ಕೈ ಮೇಲಿನ ಗುಳ್ಳೆಗೆ ಚಿಕಿತ್ಸೆಗಾಗಿ ಚಿರಾಯು ಖಾಸಗಿ ಆಸ್ಪತ್ರೆಗೆ ಬಂದಿದ್ದರು. ಈ ವೇಳೆ ವಂದನಾಳಿಗೆ ವೈದ್ಯರು 2 ಇಂಜೆಕ್ಷನ್ ಮಾಡಿದ್ದಾರೆ. ಇಂಜೆಕ್ಷನ್ ಬಳಿಕ ವಂದಾನ ಆರೋಗ್ಯದಲ್ಲಿ ಏರುಪೇರಾಗಿದೆ.
ಬಳಿಕ ಮತ್ತೊಂದು ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ರವಾನಿಸಲಾಗಿದೆ. ಆದರೆ, ವೀರಾಪೂರು ಆಸ್ಪತ್ರೆಯಲ್ಲಿ ವಂದನಾ ಮೃತಪಟ್ಟಿರುವ ಬಗ್ಗೆ ದೃಢವಾಗಿದೆ. ವೈದ್ಯರ ನಿರ್ಲಕ್ಷ್ಯಕ್ಕೆ ಯುವತಿ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿದ ಕುಟುಂಬಸ್ಥರು ಆಸ್ಪತ್ರೆಯ ಎದುರಿನ ಗ್ಲಾಸ್ ದ್ವಂಸಗೊಳಿಸಿ ಆಕ್ರೋಶ ಹೊರಹಾಕಿದ್ದಾರೆ. ಈ ಕುರಿತು ಶಹರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.