ಬಳ್ಳಾರಿ: ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಆರೋಪಿಗಳು ಜೈಲಾಧಿಕಾರಿಗಳೊಂದಿಗೆ ಕಿರಿಕ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಕಾರಾಗೃಹ ಇಲಾಖೆಯ ಡಿಐಜಿ ಶೇಷಾ ಬಳ್ಳಾರಿ ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳಾದ ಜಿಲಾನ್ ಹಾಗೂ ಸೈಯದ್ ಜೈಲಿನಲ್ಲಿನ ಹಳೆಯ ವಿಡಿಯೋ ಇಟ್ಟುಕೊಂಡು ಬೆದರಿಕೆ ಹಾಕುವುದರೊಂದಿಗೆ ಕಿರಿಕ್ ಮಾಡುತ್ತಿದ್ದರು ಎನ್ನಲಾಗಿದೆ.
ಸದ್ಯ ಅಧಿಕಾರಿಗಳು ಈ ಕುರಿತು ತನಿಖೆ ಕೈಗೊಂಡಿದ್ದು, ಕೈದಿಗಳು ಯಾವ ವಿಡಿಯೋ ಇಟ್ಟೊಂಡಿದ್ದಾರೆ ಎಂಬ ಕುರಿತು ತನಿಖೆ ನಡೆಸುತ್ತಿದ್ದಾರೆ. ಹರ್ಷ ಕೊಲೆ ಪ್ರಕರಣದ ಹತ್ತು ಜನ ಆರೋಪಿಗಳ ಪೈಕಿ ಜಿಲಾನ್ ಹಾಗೂ ಸೈಯ್ಯದ್ ಅವರನ್ನು ಕಳೆದ ತಿಂಗಳು ಧಾರವಾಡದಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿತ್ತು.