ಬೆಂಗಳೂರು: ರಾಜ್ಯದ ಹಲವೆಡೆ ಮಳೆಯಾಗಿದ್ದು, ಅವಾಂತರ ಸೃಷ್ಟಿಯಾಗಿದೆ.
ಸಿಲಿಕಾನ್ ಸಿಟಿಯಲ್ಲಿ ಕೂಡ ಏಕಾಏಕಿ ಮಳೆಯಾಗಿದ್ದು, ಜನ- ಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದೆ. ಮಳೆಗಾಲ ಇನ್ನೂ ಆರಂಭವಾಗಿಲ್ಲ. ಆದರೂ ಮಳೆರಾಯ (rain) ಧರೆಗೆ ಸುರಿಯುತ್ತಿದ್ದಾನೆ. ಇಂದು ಕೂಡ ಬೆಂಗಳೂರು ಸೇರಿದಂತೆ ಕೆಲವೆಡೆ ಮಳೆ ಸುರಿದಿದೆ. ಬೆಂಗಳೂರಿನಲ್ಲಿ (bangaluru) ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಯೆಲ್ಲೋ ಅಲರ್ಟ್ ಕೂಡ ಘೋಷಿಸಲಾಗಿತ್ತು. ಸಂಜೆಯಾಗುತ್ತಿದ್ದಂತೆ ಮಳೆ ಸುರಿದಿದೆ.
ರಾಜಾಜಿನಗರ, ಹೆಬ್ಬಾಳ್, ಯಶವಂತಪುರ, ಯಲಹಂಕ, ವಿಧಾನಸೌಧ, ಕೆ.ಆರ್ ಸರ್ಕಲ್, ಕಾರ್ಪೊರೇಷನ್, ಶಾಂತಿ ನಗರ, ಮೆಜೆಸ್ಟಿಕ್, ಮೈಸೂರ್ ಬ್ಯಾಂಕ್, ಟೌನ್ಹಾಲ್, ರಿಚ್ಮಂಡ್ ಟೌನ್, ಜಯನಗರ ಸೇರಿದಂತೆ ಹಲವೆಡೆ ವ್ಯಾಪಕ ಮಳೆಯಾಗಿದೆ. ಏಕಾಏಕಿ ಸುರಿದ ಮಳೆಯಿಂದಾಗಿ ವಾಹನ ಸವಾರರು ಪರದಾಟ ನಡೆಸಿದ್ದಾರೆ. ಇನ್ನುಳಿದಂತೆ ರಾಜ್ಯದ ಹಾಸನ, ಕರವಳಿ ಭಾಗ, ಕೊಡಗು, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. ಹಲವೆಡೆ ಸಾಕಷ್ಟು ಅವಾಂತರ ಸೃಷ್ಟಿಸಿದೆ.