ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಕೂಡ ಮಳೆಯಾಗಿದ್ದು, ಹಲವೆಡೆ ಮಳೆರಾಯ ಭೂಮಿಗೆ ತಂಪು ಎರೆದರೆ, ಇನ್ನೂ ಹಲವೆಡೆ ಅವಾಂತರ ಸೃಷ್ಟಿಸಿದ್ದಾನೆ.
ಹಾವೇರಿ (Haveri) ಜಿಲ್ಲೆಯಲ್ಲಿ ಸಿಡಿಲು ಬಡಿದು 30 ಕುರಿಗಳು ಸಾವನ್ನಪ್ಪಿವೆ. ಹಾವೇರಿಯ ಹಿರೇಕೆರೂರು ತಾಲೂಕಿನ ಹುಲಬಿಕೊಂಡ ಗ್ರಾಮದಲ್ಲಿ ಸಿಡಿಲು ಬಡಿದು 30 ಕುರಿಗಳು ಸಾವನ್ನಪ್ಪಿವೆ. ಹಾನಗಲ್ ತಾಲೂಕಿನ ಕುರಿಗಾಯಿ ಈಟೇಪ್ಪ ಬನ್ನಿ ಎಂಬವರಿಗೆ ಸೇರಿದ ಕುರಿಗಳು ಸಾವಿಗೀಡಾಗಿವೆ. ಸ್ಥಳಕ್ಕೆ ಶಾಸಕ ಯು.ಬಿ. ಬಣಕಾರ ಭೇಟಿ ನೀಡಿದ್ದು, ಸೂಕ್ತ ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ. ನೀಡುವಂತೆ ಒತ್ತಾಯಿಸಿದ್ದಾರೆ.
ಮಂಗಳೂರಿನ (Mangaluru Rain) ಲ್ಲಿ ಮಳೆ ಅವಾಂತರ ಸೃಷ್ಟಿಸಿದೆ. ಪುತ್ತೂರಿನ ಬಪ್ಪಳಿಗೆ ಬಳಿ ಭಾರೀ ಗಾಳಿ ಮಳೆಗೆ ಮನೆ ಮೇಲೆ ತೆಂಗಿನ ಮರ ಬಿದ್ದು, ಮನೆ ಹಾನಿಯಾಗಿದೆ. ಮನೆಯವರೆಲ್ಲ ಹೊರಗೆ ಇದ್ದ ಹಿನ್ನೆಲೆಯಲ್ಲಿ ದೊಡ್ಡ ದುರಂತ ತಪ್ಪಿದಂತಾಗಿದೆ. ಕೊಡಗಿನ (Kodagu Rain) ಸುತ್ತಮುತ್ತಲಿನ ಪ್ರದೇಶದಲ್ಲಿ ಮಳೆ ಸುರಿದಿದ್ದು ಗುಡುಗು-ಸಿಡಿಲಿನ ಮಳೆ ಹಲವೆಡೆ ಅವಾಂತರ ಸೃಷ್ಟಿಸಿದೆ.