ಕಾಫಿನಾಡು ಮಲೆನಾಡಲ್ಲಿ ಧಾರಾಕಾರ ಮಳೆ ಮುಂದುವರೆದಿದ್ದು, ಧರೆ ಕುಸಿಯುತ್ತಿದೆ. ಧರೆ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಹಲವು ಕುಟುಂಬಗಳನ್ನು ಸ್ಥಳಾಂತರ ಮಾಡಲಾಗುತ್ತಿದೆ. ಧರೆ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಕುಸಿದು ಬೀಳುವ ಸ್ಥಿತಿಗೆ ಮನೆ ತಲುಪಿದೆ.
ಶೃಂಗೇರಿ ತಾಲೂಕಿನ ಸಂಕ್ಲಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 169 ಅವೈಜ್ಞಾನಿಕ ಕಾಮಗಾರಿ ಹಿನ್ನೆಲೆಯಲ್ಲಿ ಭೂಮಿ ಕುಸಿದಿದೆ. ಸುಬ್ರಹ್ಮಣ್ಯ ಎಂಬುವವರ ಮನೆಯ ಸುತ್ತ ಭೂಮಿ ಕುಸಿಯುತ್ತಿದೆ. ಹೀಗಾಗಿ ಮನೆಯಲ್ಲಿದ್ದ ಸುಬ್ರಹ್ಮಣ್ಯ ಮತ್ತು ಅವರ ತಾಯಿಯನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ.