ಕೋಲಾರ: ರಮೇಶ್ ಕುಮಾರ್ ನಮ್ಮ ಹೈಕಮಾಂಡ್ ಎಂಬ ಶಾಸಕ ಕೊತ್ತೂರು ಮಂಜುನಾಥ್ ಹೇಳಿಕೆಗೆ ಬಂಗಾರಪೇಟೆ ಕಾಂಗ್ರೆಸ್ ಶಾಸಕ ಎಸ್ ಎನ್ ನಾರಾಯಣಸ್ವಾಮಿ ತಿರುಗೇಟು ನೀಡಿದ್ದಾರೆ.
ಕೋಲಾರದಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರು ಹಾಗೂ ಎಐಸಿಸಿ ಅಧ್ಯಕ್ಷರು ನಮ್ಮ ಹೈಕಮಾಂಡ್ ರಮೇಶ್ ಕುಮಾರ್ ಅಲ್ಲ. ರಮೇಶ್ ಕುಮಾರ್ ಜಿಲ್ಲೆಯ ಹಿರಿಯ ರಾಜಕಾರಣಿ. ಅವರಿಗೆ ನಮ್ಮ ಗೌರವ ಇರುತ್ತದೆ ಎಂದು ತಿಳಿಸಿದ್ದಾರೆ.