ಮೈಸೂರು : ದಸರಾದಲ್ಲಿ ಬಲೂನ್ ಮಾರಲು ಬಂದಿದ್ದ 10 ವರ್ಷದ ಬಾಲಕಿ ಇಂದು ಶವವಾಗಿ ಪತ್ತೆಯಾಗಿದ್ದಾಳೆ. ವಿರೂಪಗೊಂಡ ಸ್ಥಿತಿಯಲ್ಲಿ ಬಾಲಕಿಯ ಮೃತದೇಹ ಬಿದ್ದಿದ್ದ ಹಿನ್ನೆಲೆ ಇದು ರೇಪ್ ಅಂಡ್ ಮರ್ಡರ್ ಎಂದು ಪೊಲೀಸರು ಶಂಕಿಸಿದ್ದರು. ಇದೀಗ ಬಾಲಕಿಯನ್ನು ಅತ್ಯಾಚಾರವೆಸಗಿ ಕೊಲೆ ಮಾಡಿರುವುದು ಬಯಲಾಗಿದೆ. ದಸರಾ ಯಾವುದೇ ತೊಂದರೆಗಳಿಲ್ಲದೇ ಅದ್ಧೂರಿ ತೆರೆಕಂಡಿದೆ ಎನ್ನುವಷ್ಟರಲ್ಲೇ ಈ ಪೈಶಾಚಿಕ ಕೃತ್ಯ ನಡೆದಿದ್ದು, ಆತಂಕಕ್ಕೆ ಕಾರಣವಾಗಿದೆ.
ದಸರಾ ವೇಳೆ ಬಲೂನ್ ವ್ಯಾಪಾರಕ್ಕಾಗಿ ಕಲಬುರಗಿ ಕಡೆಯಿಂದ ಮೈಸೂರಿಗೆ ಹಕ್ಕಿಪಿಕ್ಕಿ ಜನಾಂಗದ 50ಕ್ಕೂ ಹೆಚ್ಚು ಕುಟುಂಬಗಳು ಬಂದಿದ್ದವು. ಬುಧವಾರ ತಡರಾತ್ರಿ,ಅಂದ್ರೆ ನಿನ್ನೆ ಸುಮಾರು 2 ಗಂಟೆ ವೇಳೆಯಲ್ಲಿ ಅಪ್ರಾಪ್ತೆಯ ಹತ್ಯೆಯಾಗಿದೆ. ಎರಡು ದಿನಗಳ ಹಿಂದೆ ಇದೇ ಜಾಗದಲ್ಲಿ ರೌಡಿ ಶೀಟರ್ನ ಸಹರ್ವತಿಯ ಬರ್ಬರ ಹತ್ಯೆ ಆಗಿತ್ತು. ಅದೇ ಜಾಗದಲ್ಲಿ ನಿನ್ನೆ ರಾತ್ರಿ ಅಪ್ರಾಪ್ತ ಬಾಲಕಿಯ ರೇಪ್- ಮರ್ಡರ್ ನಡೆದಿದೆ.

ಆರೋಪಿ ಗುರುತು ಪತ್ತೆ : ಘಟನೆ ತಿಳಿಯುತ್ತಿದ್ದಂತೆ ಪ್ರಕರಣ ದಾಖಲಿಸಿಕೊಂಡ ನಜರಬಾದ್ ಠಾಣಾ ಪೊಲೀಸರು ಆರೋಪಿಯ ಗುರುತು ಪತ್ತೆ ಹಚ್ಚಿದ್ದಾರೆ. ರೆಡ್ ಶರ್ಟ್, ಜೀನ್ಸ್ ಪ್ಯಾಂಡ್ ಧರಸಿದ್ದ ಕೊಲೆ ಆರೋಪಿಯ ಫೋಟೋ ಸಿಸಿಟಿವಿಯಲ್ಲಿ ಲಭ್ಯವಾಗಿದೆ. ಕೃತ್ಯ ಎಸಗುವ ವೇಳೆ ಆರೋಪಿ ಕಾಲಿಗೆ ಚಪ್ಪಲಿ ಕೂಡ ಧರಿಸಿರಲಿಲ್ಲ ಎಂಬುದೂ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಗೊತ್ತಾಗಿದೆ.

ಫೋಟೋ ಲಭ್ಯವಾದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆರೋಪಿಯ ಹಿನ್ನೆಲೆಯನ್ನು ಪತ್ತೆಹಚ್ಚಿದ್ದಾರೆ. ಆರೋಪಿಯನ್ನ ಸಿದ್ದಲಿಂಗಪುರ ನಿವಾಸಿ ಕಾರ್ತಿಕ್ (31) ಎಂದು ಗುರುತಿಸಲಾಗಿದೆ. 2 ವರ್ಷ ಜೈಲು ವಾಸ ಅನುಭವಿಸಿದ್ದ ಕಾರ್ತಿಕ್ 4 ತಿಂಗಳ ಹಿಂದಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ. ಊರು ಸೇರದೇ ಎಲ್ಲೆಂದರಲ್ಲಿ ಕುಡಿದು ಅಲೆಯುತ್ತಿದ್ದ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ. ಸದ್ಯ ಆತನಿಗಾಗಿ [ಪೊಲೀಸರು ಬಲೆ ಬೀಸಿದ್ದಾರೆ.