ಬೆಂಗಳೂರು: ಶಾಸಕ ಮುನಿರತ್ನ ವಿರುದ್ಧ ಸಂತ್ರಸ್ತೆ ಗಂಭೀರ ಆರೋಪ ಮಾಡಿದ್ದಾರೆ.
ಈಗಾಗಲೇ ಅತ್ಯಾಚಾರ ಪ್ರಕರಣದಲ್ಲಿ ಶಾಸಕ ಮುನಿರತ್ನ ಎಸ್ ಐಟಿ ಕಸ್ಟಡಿಯಲ್ಲಿದ್ದಾರೆ. ಕೋರ್ಟ್ ಆದೇಶದಂತೆ ಮುನಿರತ್ನರನ್ನು ವಶಕ್ಕೆ ಪಡೆದ ವಿಶೇಷ ತನಿಖಾ ದಳದ ಅಧಿಕಾರಿಗಳು ಆರೋಪಿಯ ವಿಚಾರಣೆ ಮಾಡುತ್ತಿದ್ದಾರೆ. ಇನ್ನೊಂದೆಡೆ ಸಂತ್ರಸ್ತ ಮಹಿಳೆ ಮುನಿರತ್ನ ವಿರುದ್ಧ ಮತ್ತಷ್ಟು ಗಂಭೀರ ಆರೋಪ ಮಾಡಿದ್ದಾರೆ.
ವಿಧಾನಸೌಧ ಮತ್ತು ವಿಕಾಸಸೌದದಲ್ಲಿ ಆತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತ ಮಹಿಳೆ ಪೊಲೀಸರ ಮುಂದೆ ಮಹತ್ವದ ಹೇಳಿಕೆ ನೀಡಿದ್ದಾರೆ. ವಿಧಾನಸೌಧ ಮತ್ತು ವಿಕಾಸಸೌದದಲ್ಲಿ ಮಾತ್ರವಲ್ಲದೇ ಸರ್ಕಾರಿ ಕಾರಿನಲ್ಲೂ ಅತ್ಯಾಚಾರವೆಸಗಿರುವುದಾಗಿ ಸಂತ್ರಸ್ತ ಮಹಿಳೆ ಪೊಲೀಸರ ಮುಂದೆ ಹೇಳಿಕೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ಹೇಳಿಕೆ ಮುನಿರತ್ನಗೆ ಸಾಕಷ್ಟು ಸಂಕಷ್ಟ ತಂದೊಡ್ಡಿದೆ.
ಪರಪ್ಪನ ಜೈಲಿನಿಂದ ಎಸ್ ಐಟಿ ಕಚೇರಿಗೆ ಬಂದಿರುವ ಮುನಿರತ್ನ ಈಗ ಮಂಕಾಗಿದ್ದಾರೆ. ತನಿಖಾಧಿಕಾರಿ ಎಸ್ಪಿ ಸೌಮ್ಯಲತಾ ಮತ್ತು ಎಸಿ ಸೈಮನ್ ಆರೋಪಗಳ ಕುರಿತು ಪ್ರಾಥಮಿಕ ಮಾಹಿತಿ ಕಲೆ ಹಾಕಿದ್ದಾರೆ. ಈಗಾಗಲೇ ಮುನಿರತ್ನ ವಿರುದ್ಧ ಉತ್ತರಗಳನ್ನು ಪಡೆಯುತ್ತಿದ್ದಾರೆ. ಸಿಕ್ಕಿರುವ ಸಾಕ್ಷ್ಯಗಳನ್ನು ಮುಂದಿಟ್ಟು ಮತ್ತೊಮ್ಮೆ ಮುನಿರತ್ನರನ್ನು ವಿಚಾರಣೆ ನಡೆಸಲಿದ್ದಾರೆ.
ಅಲ್ಲದೇ, ಆರೋಪಿ ಸ್ಥಳ ಮಹಜರು ಕೂಡ ನಡೆಯಲಿದೆ. ಆರೋಪಿ ಮುನಿರತ್ನ ಪುರುಷತ್ವ ಪರೀಕ್ಷೆ ನಡೆಸುವ ಸಾಧ್ಯತೆ. ಬೌರಿಂಗ್ ಆಸ್ಪತ್ರೆಯಲ್ಲಿ ನಡೆಯಲಿರುವ ಪುರುಷತ್ವ ಪರೀಕ್ಷೆ, ಮುನಿರತ್ನ ಮೊಬೈಲ್ ಬಗ್ಗೆ ಎಸ್ ಐಟಿ ಹೆಚ್ಚು ಪೋಕಸ್ ಮಾಡಿದೆ. ಆದ್ರೆ ಕೋಲಾರದ ಬಳಿ ಮೊಬೈಲ್ ಮಿಸ್ಸಿಂಗ್ ಆಗಿದೆ ಎಂದು ಮುನಿರತ್ನ ಹೇಳಿದ್ದಾರೆ.
ಸದ್ಯ ಮುನಿರತ್ನ ಮೊಬೈಲ್ ನ IMEI ನಂಬರ್ ಪಡೆದು ಮೊಬೈಲ್ ಶೋಧ ನಡೆಸಿದ್ದಾರೆ. ಈ ಮೊಬೈಲ್ ನಿಂದಲೇ ವೀಡಿಯೋ ಕಾಲ್ ಮಾಡಿದ್ದರು ಎಂದು ತಿಳಿದು ಬಂದಿದೆ. ಅರೆಬೆತ್ತಲಾಗುವಂತೆ ಒತ್ತಾಯ ಮಾಡಿದ್ದರು ಎಂದು ಸಂತ್ರಸ್ಥೆ ಆರೋಪ ಮಾಡಿದ್ದಾರೆ. ಹೀಗಾಗಿ ಮುನಿರತ್ನಗೆ ಸಂಕಷ್ಟ ಶುರುವಾಗಿದೆ.