ಬೆಂಗಳೂರು: ಆರ್ ಸಿಬಿ ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ತನಿಖೆ ಮುಂದುವರೆದಿದೆ.
ಇಂದು ವಿಚಾರಣೆಗೆ ಮಾಜಿ ಪೊಲೀಸ್ ಕಮಿಷನರ್ ದಯಾನಂದ್ ಹಾಜರಾಗಿದ್ದರು. ಈ ಹಿಂದೆ ಎರಡು ಬಾರಿ ನೋಟಿಸ್ ನೀಡಿದ್ದರೂ ದಯಾನಂದ್ ಗೈರಾಗಿದ್ದರು. ಆದರೆ, ಇಂದು ಜಿಲ್ಲಾಧಿಕಾರಿ ಕಚೇರಿಗೆ ಹಾಜರಾಗಿ ವಿಚಾರಣೆ ಎದುರಿಸಿದ್ದಾರೆ.
ಕಾಲ್ತುಳಿತ ದುರಂತ ಪ್ರಕರಣದಲ್ಲಿ ಪೊಲೀಸ್ ಕಮಿಷನರ್ ಬಿ.ದಯಾನಂದ್ ಅಮಾನತಾಗಿದ್ದರು. ಸದ್ಯ ಈ ಕುರಿತು ತನಿಖೆ ನಡೆಯುತ್ತಿದ್ದು, ಜಿಲ್ಲಾಧಿಕಾರಿ ಎದುರು ದಯಾನಂದ್ ತಮ್ಮ ಹೇಳಿಕೆ ದಾಖಲಿಸಿದ್ದಾರೆ. ತನಿಖೆಯಲ್ಲಿ ಪ್ರಮುಖ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ ಎನ್ನಲಾಗಿದೆ.