ರಿಕ್ಕಿ ರೈ ಮೇಲೆ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದು, ಇಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಎ2, ರಿಕ್ಕಿ ರೈ ಚಿಕ್ಕಮ್ಮ ಅನುರಾಧ ಅವರು ವಿಚಾರಣೆಗೆ ಹಾಜರಾಗಿದ್ದಾರೆ.
ರಾಮನಗರ ಡಿವೈಎಸ್ಪಿ ಶ್ರೀನಿವಾಸ್ ಅವರು ಅನುರಾಧರನ್ನು ವಿಚಾರಣೆಗೊಳಪಡಿಸಿದ್ದಾರೆ. ಶೂಟೌಟ್ ಪ್ರಕರಣದ ಬಗ್ಗೆ ಅಧಿಕಾರಿಗಳ ಸಾಲು ಸಾಲು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ. ಆದರೆ ಅನುರಾಧ, ಇದರಲ್ಲಿ ನನ್ನ ಪಾತ್ರವಿಲ್ಲ ಎಂದು ಉತ್ತರಿಸಿದ್ದಾರೆ ಎನ್ನಲಾಗಿದೆ.
ರಿಕ್ಕಿ ರೈ ಹಾಗೂ ಕುಟುಂಬಸ್ಥರು ಚಿಕ್ಕಮ್ಮ ಅನುರಾಧ ರೈ ವಿರುದ್ಧ ಹಲವು ಗಂಭೀರ ಆರೋಪಗಳನ್ನು ಮಾಡಿದ್ದರು. ಜಾಮೀನು ವಿವಾದ ಸಂಬಂಧ ಅಟ್ಯಾಕ್ ಮಾಡಿಸಿದ್ದರೆಂದು ಹೇಳಿಕೆ ನೀಡಿದ್ದರು. ಹೀಗಾಗಿ ಪೊಲೀಸರು ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಅನುರಾಧ ಅವರಿಗೆ ನೋಟಿಸ್ ನೀಡಿದ್ದರು. ಹೀಗಾಗಿ ರಾಮನಗರ ಉಪವಿಭಾಗ ಡಿವೈಎಸ್ಪಿ ಶ್ರೀನಿವಾಸ್ ಎದುರು ಅನುರಾಧ ವಿಚಾರಣೆಗೆ ಹಾಜರಾಗಿ ಹೇಳಿಕೆ ದಾಖಲಿಸಿ ಹೋಗಿದ್ದಾರೆ ಎನ್ನಲಾಗಿದೆ.