ನವದೆಹಲಿ: ಪ್ರಸ್ತುತ ನಡೆಯುತ್ತಿರುವ 2025ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2025) ಟೂರ್ನಿಯಲ್ಲಿ ಸತತ ಬ್ಯಾಟಿಂಗ್ ವೈಫಲ್ಯ ಅನುಭವಿಸುತ್ತಿರುವ ಲಖನೌ ಸೂಪರ್ ಜೈಂಟ್ಸ್ ಎಲ್ಎಸ್ಜಿ) ತಂಡದ ನಾಯಕ ರಿಷಭ್ಪಂತ್ಗೆ, ಭಾರತದ ಮಾಜಿ ಆಲ್ ರೌಂಡರ್ ಯುವರಾಜ್ ಸಿಂಗ್ ಅವರ ತಂದೆ ಯೋಗರಾಜ್ ಸಿಂಗ್ ಉಪಯುಕ್ತ ಸಲಹೆಯನ್ನು ನೀಡಿದ್ದಾರೆ. ಕೇವಲ 5 ನಿಮಿಷಗಳಲ್ಲಿ ಪಂತ್ ಅವರ ಬ್ಯಾಟಿಂಗ್ ಸಮಸ್ಯೆಯನ್ನು ಪರಿಹರಿಸಬಹುದು ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

27 ಕೋಟಿ ರೂ. ಗಳಿಗೆ ಲಖನೌ ಫ್ರಾಂಚೈಸಿಗೆ ಸೇರ್ಪಡೆಯಾಗಿದ್ದ ರಿಷಭ್ಪಂತ್, ಈ ಬಾರಿಯ ಐಪಿಎಲ್ ನಲ್ಲಿ ಬ್ಯಾಟ್ಸಮನ್ ಆಗಿ ಹಾಗೂ ನಾಯಕನಾಗಿಯೂ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದಾರೆ. ಇಲ್ಲಿಯ ತನಕ ಆಡಿದ 12 ಪಂದ್ಯಗಳಿಂದ ಪಂತ್12.27ರ ಸರಾಸರಿಯಲ್ಲಿ ಕೇವಲ 135 ರನ್ ಗಳನ್ನು ಕಲೆ ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ರಿಷಭ್ ಪಂತ್ ಸಾಕಷ್ಟು ಟೀಕೆಗಳಿಗೆ ಗುರಿಯಾಗಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿದ ಯೋಗರಾಜ್ ಸಿಂಗ್, ರಿಷಭ್ ಪಂತ್ ಅವರ ಬ್ಯಾಟಿಂಗ್ ಸಮಸ್ಯೆಯನ್ನು ಕೇವಲ 5 ನಿಮಿಷಗಳಲ್ಲಿ ಪರಿಹರಿಸಲಾಗುವುದು. ಅವರ ಬ್ಯಾಟಿಂಗ್ ನಲ್ಲಿನ ತಪ್ಪನ್ನು ತಿದ್ದಲಾಗುವುದು. ಅವರ ತಲೆ ಒಂದು ಕಡೆ ಸ್ಥಿರವಾಗಿ ನಿಲ್ಲುತ್ತಿಲ್ಲ ಮತ್ತು ಅವರ ಎಡ ಭುಜ ಜಾಸ್ತಿ ತೆರೆಯುತ್ತಿದೆ,” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. “ಈ ತಪ್ಪುಗಳನ್ನು ಸರಿ ಮಾಡಿದರೆ, ಅವರು ಹೆಚ್ಚಿನ ಸಮಯ ತೆಗೆದುಕೊಳ್ಳದೆ ಬ್ಯಾಟಿಂಗ್ ಲಯಕ್ಕೆ ಮರಳಲಿದ್ದಾರೆ ಎಂದು ಯೋಗರಾಜಿ ಸಿಂಗ್ ಹೇಳಿದ್ದಾರೆ.
ಮುಂದಿನ ಸವಾಲು
ಮೇ 22 ರದು ಗುಜರಾತ್ ಟೈಟನ್ಸ್ ಹಾಗೂ ಲಖನೌ ಸೂಪರ್ ಜೈಂಟ್ಸ್ ತಂಡಗಳು ಕಾದಾಟ ನಡೆಸಿವೆ. ಅಲ್ಲೂ ರಿಷಭ್ ನಿರೀಕ್ಷಿತವಾಗಿ ಆಡಿಲ್ಲ. ಇಂಗ್ಲೆಂಡ್ ವಿರುದ್ಧದ ಮುಂಬರುವ ಐದು ಪಂದ್ಯಗಳ ಟೆಸ್ಟ್ ಸರಣಿಯ ನಿಮಿತ್ತ ಭಾರತ ತಂಡಕ್ಕೆ ರಿಷಭ್ ಪಂತ ಮುಖ್ಯ ಆಟಗಾರನಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಫಾರ್ಮ್ ಗೆ ಮರಳುವುದು ಅನಿವಾರ್ಯವಾಗಿತ್ತು
ಭಾರತ ಟೆಸ್ಟ್ ತಂಡದ ನಾಯಕತ್ವದ ರೇಸ್ ನಲ್ಲಿ ಶುಭಮನ್ ಗಿಲ್ ರೊಂದಿಗೆ ರಿಷಬ್ ಪಂತ್ ಕೂಡ ಇದ್ದಾರೆ. ಇತ್ತೀಚೆಗೆ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್ ವೃತ್ತಿ ಜೀವನಕ್ಕೆ ವಿದಾಯ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಅಜಿತ್ ಅಗರ್ಕರ್ ಸಾರಥ್ಯದ ಬಿಸಿಸಿಐ ಆಯ್ಕೆ ಸಮಿತಿಯು ಟೆಸ್ಟ್ ನಾಯಕತ್ವಕ್ಕೆ ಸೂಕ್ತ ಆಟಗಾರನ ಹುಡುಕಾಟದಲ್ಲಿದೆ. ಜಸ್ಪ್ರೀತ್ ಬುಮ್ರಾ ನಾಯಕತ್ವದ ರೇಸ್ ನಿಂದ ಹೊರ ಬಿದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಗಿಲ್ ಅಥವಾ ಪಂತ್ ಅವರಲ್ಲಿ ಒಬ್ಬರಿಗೆ ಟೆಸ್ಟ್ ನಾಯಕತ್ವ ನೀಡಬಹುದಾಗಿದೆ.
ಪ್ಲೇ ಆಫ್ ನಿಂದ ಹೊರ ಬಿದ್ದ ಎಲ್ ಎಸ್ ಜಿ
ರಿಷಭ್ ಪಂತ್ ನಾಯಕತ್ವದ ಲಖನೌ ಸೂಪರ್ ಜೈಂಟ್ಸ್ 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಪ್ಲೇ ಆಫ್ ನಿಂದ ಅಧಿಕೃತವಾಗಿ ಹೊರ ಬಿದ್ದಿದೆ. ಟೂರ್ನಿಯ ಮೊದಲ ಅವಧಿಯಲ್ಲಿ ಉತ್ತಮ ಪ್ರದರ್ಶನ ತೋರಿದ್ದ ಲಖನೌ ತಂಡ, ಎರಡನೇ ಅವಧಿಯಲ್ಲಿ ಸತತ ವೈಫಲ್ಯ ಅನುಭವಿಸಿತು. ಇಲ್ಲಿಯ ತನಕ ಆಡಿದ 12 ಪಂದ್ಯಗಳಲ್ಲಿ 5ರಲ್ಲಿ ಗೆಲುವು ಹಾಗೂ ಇನ್ನುಳಿದ 7 ರಲ್ಲಿ ಸೋಲು ಅನುಭವಿಸಿದೆ.