ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ಅಭಿವೃದ್ಧಿಗೆ ಮೂರು ವರ್ಷದಲ್ಲಿ 13 ಸಾವಿರ ಕೋಟಿ ರೂಪಾಯಿ ಅನುದಾನ ನೀಡಿದ್ದೇನೆ ಎಂದು ಸಿ.ಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಆಯೋಜಿಸಿರುವ “ಆರೋಗ್ಯ ಆವಿಷ್ಕಾರ” ಯೋಜನೆಯ ಅಡಿಯಲ್ಲಿ 440 ಕೋಟಿ ಕೋಟಿ ಮೊತ್ತದ ಕಾಮಗಾರಿಗಳನ್ನು ಉದ್ಘಾಟಿಸಿ, ಬಂಜಾರ ಭವನವನ್ನು ಲೋಕಾರ್ಪಣೆಗೊಳಿಸಿ ಸಿಎಂ ಸಿದ್ದು ಮಾತನಾಡಿದರು. ವರ್ಷಕ್ಕೆ 5 ಸಾವಿರ ಕೋಟಿ ರೂ. ಕೆಕೆಆರ್ ಡಿಬಿಗೆ ಕೊಡುವುದಾಗಿ ನಾವು ಚುನಾವಣೆ ವೇಳೆ ಭರವಸೆ ನೀಡಿದ್ದೆವು.
ಕಾಂಗ್ರೆಸ್ ಕೊಟ್ಟ ಭರವಸೆಯಂತೆ ಇಲ್ಲಿಯವರೆಗೂ 13 ಸಾವಿರ ಕೋಟಿ ಹಣ ನೀಡಿದ್ದೇವೆ. ಇಲ್ಲಿಯವರೆಗೂ 5 ಸಾವಿರದ 300 ಕೋಟಿ ಮೊತ್ತ ಖರ್ಚಾಗಿದ್ದು ನಮ್ಮ ಕೆಲಸಗಳು ಜನರಿಗೆ ತಲುಪಿದೆ ಎಂದರು.