ಕಾಂಗ್ರೆಸ್ ಸಚಿವರ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ.
ನಕಲಿ ಬಿಲ್ ತಯಾರಿಸಿ ಎರಡು ಬಾರಿ ಕಾಮಗಾರಿ ಹೆಸರಿನಲ್ಲಿ ಹಣ ಬಿಡುಗಡೆ ಮಾಡಿಸಿಕೊಂಡಿರುವ ಆರೋಪ ಕೇಳಿ ಬಂದಿದೆ. ಬಿಜೆಪಿ ಮುಖಂಡ ಎನ್.ಅರ್. ರಮೇಶ್ ಈ ಕುರಿತು ಆರೋಪ ಮಾಡಿದ್ದಾರೆ.
ಲೋಕಯುಕ್ತ. ಬಿಬಿಎಂಪಿ ಅಯುಕ್ತರಿಗೆ ದಾಖಲೆ ಸಮೇತ ದೂರು ದಾಖಲಿಸಿದ್ದಾರೆ. ಸಚಿವ ಜಮೀರ್ ಅಹಮದ್ ಕ್ಷೇತ್ರದ ಅಧಿಕಾರಿಗಳಿಗಳ ಮೇಲೆ ಲೋಕಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ.
ಒಂದು ರೂಪಾಯಿ ಕಾಮಗಾರಿ ಮಾಡದೆ ಸುಮಾರು 55 ಕೋಟಿ ರೂ. ಲೂಟಿ ಮಾಡಿರುವ ಆರೋಪವನ್ನು ಮಾಡಿದ್ದಾರೆ. ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ 47 ಕೋಟಿ ರೂ. ಕಾಮಗಾರಿಗಳನ್ನು ಕೆಲಸ ಮಾಡದೆ ಹಣ ಬಿಡುಗಡೆ ಮಾಡಿಸಿಕೊಂಡಿರುವ ಆರೋಪ ಕೇಳಿ ಬಂದಿದೆ. ತಮ್ಮ ರಾಜಕೀಯ ಪ್ರಭಾವ ಬೀರಿ ಹಣ ಬಿಡುಗಡೆ ಮಾಡಿಸಲಾಗಿದೆ. ನಕಲಿ ಬಿಲ್ ಗೆ ಸ್ಥಳೀಯ ಇಂಜಿನಿಯರ್ ಗಳು ಸಾಥ್ ನೀಡಿದ್ದಾರೆ ಎಂದು ಬಿಜೆಪಿ ಮುಖಂಡ ಎನ್.ಆರ್. ರಮೇಶ್ ಆರೋಪಿಸಿದ್ದಾರೆ.