ಬೆಂಗಳೂರು: ರಾಜ್ಯಪಾಲರಿಗೆ ಹಿರಿಯ ಪತ್ರಕರ್ತ ದಿನೇಶ್ ಅಮಿನ್ ಮಟ್ಟು ಪತ್ರ ಬರೆದಿದ್ದಾರೆ.
ನಾಲ್ಕು ಪರಿಷತ್ ಸ್ಥಾನಗಳ ನಾಮನಿರ್ದೇಶನ ಪಟ್ಟಿಯಲ್ಲಿ ದಿನೇಶ್ ಅಮಿನ್ ಮಟ್ಟು ಅವರ ಹೆಸರು ಕೂಡ ಇತ್ತು. ನಾಲ್ವರ ಹೆಸರನ್ನು ಕಾಂಗ್ರೆಸ್ ಅಂತಿಮಗೊಳಿಸಿತ್ತು. ಇದರ ಬೆನ್ನಲ್ಲೇ ದಿನೇಶ್ ಅಮಿನ್ ಮಟ್ಟು ವಿರುದ್ಧ ನಿವೇಶನ ಪಡೆದಿರುವ ಆರೋಪ ಮಾಡಲಾಗಿತ್ತು.
ಈ ಹಿನ್ನೆಲೆಯಲ್ಲಿ ಅಮಿನ್ ಪಟ್ಟು ಪತ್ರ ಬರೆದಿದ್ದಾರೆ. ತಮ್ಮ ವಿರುದ್ಧದ ಆರೋಪಗಳ ಸಂಬಂಧ ಅಮಿನ್ ಮಟ್ಟು ಸ್ಪಷ್ಟೀಕರಣ ನೀಡಿದ್ದಾರೆ. ಜೊತೆಗೆ ಜಿ.ಎಂ. ಗಾಡ್ಕರ್ ಎಂಬುವವರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ ನೀಡಬೇಕೆಂದು ಮನವಿ ಮಾಡಿದ್ದಾರೆ.