ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಏಕಾಏಕಿ ಹವಾಮಾನ ಬದಲಾವಣೆಯಾಗಿದ್ದು, ಶುಕ್ರವಾರ ಸಂಜೆ ಭಾರೀ ಬಿರುಗಾಳಿ ಬೀಸಿ ಅವಾಂತರ ಸೃಷ್ಟಿಸಿದೆ.
ಸಂಜೆ ಮೋಡ ಮುಸುಕಿದ ವಾತಾವರಣ ಸೃಷ್ಟಿಯಾಗಿತ್ತು. ಇದರ ಬೆನ್ನಲ್ಲೇ ಧೂಳು ಮಿಶ್ಚಿತ ಬಿರುಗಾಳಿ ವೇಗವಾಗಿ ಬೀಸಿದೆ. ವಾಹನಗಳ ಸಂಚಾರಕ್ಕೂ ತೊಂದರೆಯನ್ನು ಉಂಟು ಮಾಡಿದೆ.
ಗುರುಗ್ರಾಮದಲ್ಲಿ ಕಬ್ಬಿಣದ ಸರಳು ಬಿದ್ದು ಕಾರು ಜಖಂ ಆಗಿದೆ. ಹಲವೆಡೆ ಲಘು ಮಳೆಗೆ ಮರಗಳು ಧರೆಗುರುಳಿವೆ. ಬಿರುಗಾಳಿ ಹಿನ್ನೆಲೆ 15 ವಿಮಾನಗಳನ್ನು ಡೈವರ್ಟ್ ಮಾಡಲಾಗಿದೆ. ಹಲವು ವಿಮಾನಗಳ ಹಾರಾಟದಲ್ಲಿ ವಿಳಂಬ ಕಂಡು ಬಂದಿದೆ. ಹೀಗಾಗಿ ಅಲ್ಲಿನ ಜನರಿಗೆ ಎಚ್ಚರಿಕೆ ನೀಡಲಾಗಿದೆ.
ಹೊರಗಡೆ ಪ್ರಯಾಣ ಮಾಡದಿರಿ ಎಂದು ಹವಾಮಾನ ಕಚೇರಿ ಎಚ್ಚರಿಕೆ ನೀಡಿದೆ. ಮರಗಳ ಕೆಳಗೆ ಆಶ್ರಯ ಪಡೆಯಬೇಡಿ. ಕಾಂಕ್ರೀಟ್ ಮಹಡಿಗಳ ಮೇಲೆ ಮಲಗಬೇಡಿ ಮತ್ತು ಕಾಂಕ್ರೀಟ್ ಗೋಡೆಗಳ ಮೇಲೆ ಒರಗಬೇಡಿ. ವಿದ್ಯುತ್ ಉಪಕರಣಗಳನ್ನು ಅನ್ಪ್ಲಗ್ ಮಾಡಿ ಎಂದು ಸ್ಥಳೀಯ ಆಡಳಿತ ಸಲಹೆ ನೀಡಿದೆ.