ಬೆಂಗಳೂರು: ಮನಸೋ ಇಚ್ಚೆ ದರ ವಸೂಲಿ ಮಾಡುತ್ತಿದ್ದ ಆ್ಯಪ್ ಮತ್ತು ಆಟೋ ಚಾಲಕರಿಗೆ ಆರ್ ಟಿಒ ಅಧಿಕಾರಿಗಳು ಶಾಕ್ ನೀಡಿದ್ದಾರೆ.
ಪ್ರಯಾಣಿಕರಿಂದ ಆಟೋ ಚಾಲಕರು ದುಪ್ಪಟ್ಟು ದರ ವಸೂಲಿ ಮಾಡುತ್ತಿರುವ ಬಗ್ಗೆ ದೂರುಗಳು ಬಂದಿದ್ದು, ಕಾರ್ಯಾಚರಣೆಗೆ ಸಾರಿಗೆ ಇಲಾಖೆ ಅಧಿಕಾರಿಗಳು ಇಳಿದಿದ್ದಾರೆ. ಈ ವೇಳೆ ಕಾನೂನು ಉಲ್ಲಂಘನೆ ಮಾಡಿದ್ದ ಹದಿನೈದು ಆಟೋಗಳನ್ನು ಕೂಡ ಸೀಜ್ ಮಾಡಲಾಗಿದೆ. ಆಟೋದಲ್ಲಿದ್ದ ಪ್ರಯಾಣಿಕರ ಬಳಿ ದುಪ್ಪಟ್ಟು ದರ ವಸೂಲಿ ಬಗ್ಗೆ ಮಾಹಿತಿ ಕೇಳಿ ಆಟೋಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.
ಬೆಳಿಗ್ಗೆಯಿಂದ ದುಪ್ಪಟ್ಟು ದರ ಪಡೆಯುವ ಆಟೋಗಳ ವಿರುದ್ಧ ಆರ್ ಟಿಒ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಸರ್ಕಾರ ನಿಗದಿ ಮಾಡಿರುವ ದರಕ್ಕಿಂತ ಹೆಚ್ಚು ದರ ವಸೂಲಿ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಈ ವೇಳೆ ಎಚ್ಚರಿಕೆ ನೀಡಲಾಗಿದೆ.