ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದಾಗಿನಿಂದಲೂ ಬಂದಲ್ಲ ಒಂದು ಆರೋಪ ಕೇಳಿ ಬರುತ್ತಿದೆ. ಮೂಡ ಆಯ್ತು ವಾಲ್ಮೀಕಿ ಆಯ್ತು ಇದೀಗ ವಸತಿ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಎಸಗಲಾಗಿದೆ ಎಂದು ಸ್ವಪಕ್ಷದ ವಿರುದ್ಧವೇ ಶಾಸಕ ಬಿ.ಆರ್. ಪಾಟೀಲ್ ಆರೋಪ ಮಾಡಿದ್ದರು.
ಅದರ ಬೆನ್ನಲ್ಲೇ ರಾಜು ಕಾಗೆ ಹಾಗೂ ಎನ್ ಗೋಪಾಲಕೃಷ್ಣ ಅವರು ಸ್ವಪಕ್ಷದ ವಿರುದ್ಧವೇ ಅಸಮಾಧಾನವನ್ನು ವ್ಯಕ್ತಪಡಿಸಿದ್ದರು. ಇದೀಗ ಗೃಹ ಸಚಿವ ಪರಮೇಶ್ವರ ಅವರ ಒಂದು ಹೇಳಿಕೆ ತೀವ್ರ ಟೀಕೆಗೆ ಗ್ರಾಸವಾಗಿದೆ. ಬಾಗಲಕೋಟೆಯಲ್ಲಿ ಮಾತನಾಡಿದ ಅವರು ಬಾದಾಮಿ ಅಭಿವೃದ್ಧಿಗೆ ಒಂದು ಯೋಜನೆ ಸಿದ್ಧ ಮಾಡಿ. ಅದು ಎಷ್ಟು ಮೊತ್ತದಾದರೂ ಪರವಾಗಿಲ್ಲ.
ಸಾವಿರ ಕೋಟಿನೆ ಆಗಿರಲಿ ಪ್ರಸ್ತಾವನೆ ಸಿದ್ಧಮಾಡಿ ಕೇಂದ್ರಕ್ಕೆ ಕಳುಹಿಸಿಕೊಡಿ. ಯಾಕೆಂದರೆ ನಮ್ಮ ಬಳಿ ದುಡ್ಡಿಲ್ಲ ಸಿದ್ದರಾಮಯ್ಯನ ಬಳಿ ದುಡ್ಡಿಲ್ಲ. ನಮ್ಮ ಬಳಿ ಇದ್ದ ದುಡ್ಡಿನಲ್ಲಿ ನಿಮಗೆ ಈಗಾಗಲೇ ಅಕ್ಕಿ ಬೇಳೆ ಎಣ್ಣೆ ಕೊಟ್ಟಿದ್ದೇವೆ ಎಂದು ತಿಳಿಸಿದ್ದಾರೆ. ಈ ವಿಡಿಯೋ ಎಲ್ಲೆಡೆ ವೈರಲ್ ಆಗ್ತಾ ಇದೆ ಸರ್ಕಾರಕ್ಕೆ ಮತ್ತೊಂದು ರೀತಿಯಲ್ಲಿ ಮುಜುಗರ ಉಂಟುಮಾಡಿದೆ.