ಬೆಂಗಳೂರು: ಬೆಳಗಾವಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸಮಾವೇಶ ಮಹಾತ್ಮ ಗಾಂಧಿ ಅವರಿಗೆ ಸಲ್ಲಿಸುವ ಗೌರವ ಎಂದು ಕಾಂಗ್ರೆಸ್ಸಿಗರು ಬೀಗುತ್ತಿದ್ದರೆ, ಇತ್ತ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ(Prahlad Joshi), ಇದೆಲ್ಲಾ ನಕಲಿ ಎಂದು ವ್ಯಂಗ್ಯವಾಡಿದ್ದಾರೆ.
ಬೆಳಗಾವಿಯಲ್ಲಿನ ಕಾಂಗ್ರೆಸ್(congress) ಸಮಾವೇಶದ ಬಗ್ಗೆ ಮಾಧ್ಯಮಗಳ ಮುಂದೆ ಮಾತನಾಡಿದ ಪ್ರಹ್ಲಾದ್ ಜೋಶಿ, 1924 ರಲ್ಲಿ ಮೊದಲ ಕಾಂಗ್ರೆಸ್ ಅಧಿವೇಶನ ಆಗಿದ್ದು ನಿಜ. 1947 ರಲ್ಲಿ ಭಾರತಕ್ಕೆ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ನೇತೃತ್ವದಲ್ಲಿ ಸ್ವಾತಂತ್ರ್ಯ ಬಂದಿದ್ದು ನಿಜ. ಅಂದು ಮಹಾತ್ಮ ಗಾಂಧಿ ಅವರ ಸ್ವಾತಂತ್ರ್ಯದ ಬಳಿಕ ಕಾಂಗ್ರೆಸ್ ಪಕ್ಷವನ್ನು ವಿಸರ್ಜನೆ ಮಾಡಲು ತಿಳಿಸಿದ್ರು. ಆದ್ರೆ, ಅದ್ಯಾವುದು ಆಗಲಿಲ್ಲ. ಇಂದು ನಡೆಯುತ್ತಿರುವ ಅಧಿವೇಶನದಲ್ಲಿ ಭಾಗಿಯಾಗುತ್ತಿರುವವರೆಲ್ಲಾ ನಕಲಿ ಗಾಂಧಿಗಳು ಎನ್ನುವ ಮೂಲಕ ಸಮಾವೇಶಕ್ಕೆ ಟಕ್ಕರ್ ಕೊಟ್ಟಿದ್ದಾರೆ.
ಇದೇ ಪ್ರಹ್ಲಾದ್ ಜೋಶಿ ಅವರ ಹೇಳಿಕೆಗೆ ಪ್ರತಿಕ್ರಿಯೆ ಕೊಟ್ಟಿರುವ ಸಿಎಂ ಸಿದ್ಧರಾಮಯ್ಯ, ಪ್ರಹ್ಲಾದ್ ಜೋಶಿಗೆ ಇತಿಹಾಸವೇ ಗೊತ್ತಿಲ್ಲ ಎನ್ನುವ ಮೂಲಕ ಕೌಂಟರ್ ನೀಡಿದ್ದಾರೆ. ಒಟ್ಟಾರೆ, ಇಂದು ಬೆಳಗಾವಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸಮಾವೇಶದ ಆಖಾಡದಲ್ಲಿ ಸಿಎಂ ಸಿದ್ಧರಾಮಯ್ಯ v/s ಪ್ರಹ್ಲಾದ್ ಜೋಶಿ ರಾಜಕೀಯ ಜಟಾಪಟಿ ಆರಂಭವಾಗಿದೆ.