ಚಾಮರಾಜನಗರ: ತಂದೆಯನ್ನು ಸ್ವಂತ ಮಗನೇ ಆಯುಧದಿಂದ ಹಲ್ಲೆ ಮಾಡಿ ಕಾವೇರಿ ನದಿಗೆ ತಳ್ಳಿ ಹತ್ಯೆ ಮಾಡಿರುವ ಘಟನೆ ಹನೂರು ತಾಲೂಕಿನ ಗೋಪಿನಾಥಂ ಸಮೀಪದ ಆತೂರು ಗ್ರಾಮದಲ್ಲಿ ನಡೆದಿದೆ.
ಗೋಪಿನಾಥಂ ಗ್ರಾಮದ ಶಂಕರನ್ (70) ಹತ್ಯೆಯಾದವರು. ಈತನ ಎರಡನೇ ಮಗ ಗೋವಿಂದರಾಜ್ ಆರೋಪಿ. ಎರಡು ದಿನಗಳ ಹಿಂದೆ ಶಂಕರನ್ ಮನೆಗೆ ಬಾರದ ಹಿನ್ನೆಲೆ ಕುಟುಂಬದವರು ಮಲೆಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ಸಲ್ಲಿಸಿದ್ದರು.

ಶನಿವಾರ ಸಂಜೆ ಕಾವೇರಿ ನದಿಯಲ್ಲಿ ಶಂಕರನ್ ಮೃತದೇಹ ಪತ್ತೆಯಾಗಿದೆ. ಮೃತನ ಪತ್ನಿ ಪಳನಿಯಮ್ಮ ತಮ್ಮ ಮಗ ಗೊವಿಂದರಾಜು ಅಪ್ಪನನ್ನು ಆಯುಧಗಳಿಂದ ಹೊಡೆದು ಕಾವೇರಿ ನದಿಗೆ ತಳ್ಳಿದ್ದಾನೆ ಎಂದು ದೂರು ಕೊಟ್ಟಿದ್ದರು. ಈ ಹಿನ್ನೆಲೆ ಆತನ ಮಗ ಗೋವಿಂದರಾಜ್ನನ್ನು ಪೊಲೀಸರು ಬಂಧಿಸಿದ್ದಾರೆ.
ಶಂಕರನ್ ಮತ್ತು ಗೋವಿಂದರಾಜು ಮೇಕೆ ಸಾಕಿಕೊಂಡಿದ್ದರು. ಮೇಕೆಗಳನ್ನು ಭಾಗ ಮಾಡುವ ವಿಚಾರಕ್ಕೆ ಇವರಿಬ್ಬರ ನಡುವೆ ಜಗಳ ನಡೆದು ವಿಕೋಪಕ್ಕೆ ತಿರುಗಿತ್ತು. ಈ ವೇಳೆ ಬಲವಾದ ಆಯುಧದಿಂದ ತಂದೆಯನ್ನು ಗಾಯಗೊಳಿಸಿ ಮಗ ಗೋವಿಂದ ನದಿಗೆ ದೂಕಿದ್ದಾನೆ. ಸದ್ಯ, ಮಲೆಮಹದೇಶ್ವರ ಬೆಟ್ಟ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿ ಮಗನನ್ನು ಬಂಧಿಸಿದ್ದಾರೆ.
ಇದನ್ನೂ ಓದಿ: ಸತಾರಾ ವೈದ್ಯೆ ಆತ್ಮಹತ್ಯೆ ಪ್ರಕರಣಕ್ಕೆ ಸ್ಫೋಟಕ ತಿರುವು: “ಆಕೆಯೇ ನನಗೆ ಕಿರುಕುಳ ನೀಡುತ್ತಿದ್ದಳು” ಎಂದ ಟೆಕ್ಕಿ


















