ಬೆಂಗಳೂರು ಗ್ರಾಮಾಂತರ: ಎಸ್ಸೆಸ್ಸೆಲ್ಸಿ ಫಲಿತಾಂಶ ಇಂದು ಪ್ರಕಟವಾಗಿದ್ದು, ರಾಜ್ಯಕ್ಕೆ ಎರಡನೇ ಸ್ಥಾನ ಗಳಿಸಿದ ಭಾವನ ಶಾಲೆಯಲ್ಲಿ ಸಂಭ್ರಮ ಮನೆ ಮಾಡಿದೆ.
ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ನೀಲಗಿರೇಶ್ವರ ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿ ಭಾವನ ರಾಜ್ಯಕ್ಕೆ ಎರಡನೇ ಸ್ಥಾನ ಗಳಿಸಿದ್ದಾಳೆ. ಹೀಗಾಗಿ ಶಾಲೆಯ ಶಿಕ್ಷಕರು 2ನೇ ಸ್ಥಾನ ಪಡೆದ ವಿದ್ಯಾರ್ಥಿ ಭಾವನಾಗೆ ಸಿಹಿ ತಿನಿಸಿ ಸಂತಸ ವ್ಯಕ್ತಪಡಿಸಿದ್ದಾರೆ.
ಈ ವೇಳೆ ಮಾತನಾಡಿರುವ ಭಾವನ, ನನಗೆ ತುಂಬಾ ಖುಷಿ ಆಗ್ತಿದೆ. ಶ್ರಮಕ್ಕೆ ತಕ್ಕ ಫಲ ಸಿಕ್ಕಿದೆ. ನಮ್ಮ ಕುಟುಂಬಕ್ಕೆ, ನಾನು ಓದಿದ ಶಾಲೆಯ ಶಿಕ್ಷಕರಿಗೆ ಧನ್ಯವಾದ ತಿಳಿಸುತ್ತೇನೆ. ನನ್ನ ಕುಟುಂಬಸ್ಥರು ಕೂಡ ನನಗೆ ಸಾಕಷ್ಟು ಬೆಂಬಲವಾಗಿ ನಿಂತಿದ್ದರು ಓದುವುದಕ್ಕೆ. ಮುಂದೆ ಎಂಬಿಬಿಎಸ್ ಓದುವ ಇಚ್ಚೆ ಇದೆ ಎಂದು ಹೇಳಿದ್ದಾರೆ.