ಮಂಡ್ಯ : ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದ್ದು, ನಗರದ ಕೆ.ಆರ್. ಪೇಟೆ ತಾಲ್ಲೂಕಿನ ಅಗಸರಹಳ್ಳಿ ಗ್ರಾಮದ ಧೃತಿ.ಜೆ 625ಕ್ಕೆ 625 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಮೊದಲ ರ್ಯಾಂಕ್ ಗಳಿಸಿದ್ದಾರೆ.
ಜ್ಞಾನೇಶ್-ರಶ್ಮಿ ದಂಪತಿ ಪುತ್ರಿಯಾಗಿರುವ ಜೆ.ಧೃತಿ ಕೆ.ಆರ್.ಪೇಟೆಯ ಸಾಹುಕಾರ್ ಚಿಕ್ಕಣ್ಣಗೌಡ ಆಂಗ್ಲ ಪ್ರೌಢಶಾಲೆಯ ವಿದ್ಯಾರ್ಥಿನಿಯಾಗಿದ್ದಾಳೆ. ಇದೀಗ ರಾಜ್ಯಕ್ಕೆ ಪ್ರಥಮ ಸ್ಥಾನ ಬಂದಿರುವುದರಿಂದ ಕುಟುಂಬಸ್ಥರಿಂದ ಧೃತಿಗೆ ಅಭಿನಂದನೆ ಸಲ್ಲಿಸಲಾಗಿದೆ.