ಬೆಂಗಳೂರು: ಕಾಲ್ತುಳಿತದಲ್ಲಿ ಹನ್ನೊಂದು ಜನ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನೂತನ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಮಾತನಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಚಾರ್ಜ್ ತೆಗೆದುಕೊಂಡ ನಂತರ ನೈಟ್ ರೌಂಡ್ಸ್ ಹೋಗಿದ್ದೆ. ಚಾರ್ಜ್ ಗೂ ಮುಂಚೆ ನಮ್ಮ ತಂಡ ಕೆಲಸ ಮಾಡುತ್ತಿತ್ತು. ಸದ್ಯ ಎಫ್ಐಆರ್ ಸಂಬಂಧ ತನಿಖೆ ನಡೆಸಲಾಗುತ್ತಿದೆ. ಒಂದಷ್ಟು ಜನರನ್ನು ಅರೆಸ್ಟ್ ಮಾಡಲಾಗಿದೆ. ಈ ಪ್ರಕರಣದ ಬಗ್ಗೆ ಇಷ್ಟು ಬೇಗ ಮಾತನಾಡುವುದು ಅಷ್ಟು ಸರಿಯಲ್ಲ ಎಂದಿದ್ದಾರೆ.
ಬೆಂಗಳೂರು ನಗರ ಪೊಲೀಸರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ನನ್ನ ನೇತೃತ್ವದಲ್ಲಿ ಕೂಡ ಒಳ್ಳೆಯ ಕೆಲಸ ಮಾಡುತ್ತಾರೆ ಎಂಬ ನಂಬಿಕೆ ಇದೆ. ಸಿಸ್ಟಾಮ್ಯಾಟಿಕ್ ಆಗಿ ಕೆಲಸ ನಡೆಯುತ್ತಿದೆ. ಆಗಾಗ ಚಾಲೆಂಜಿಂಗ್ ಕೆಲಸಗಳು ಎದುರಾಗುತ್ತವೆ. ಅವುಗಳನ್ನು ಚಾಲೆಂಜ್ ತೆಗೆದುಕೊಂಡೇ ಕೆಲಸ ಮಾಡುತ್ತಿದ್ದೇವೆ. ಸಿಐಡಿ ವರ್ಗಾವಣೆ ಬಗ್ಗೆ ಸದ್ಯ ಚರ್ಚೆ ನಡೆಯುತ್ತಿದೆ ಎಂದಿದ್ದಾರೆ.