ಭುವನೇಶ್ವರ: ಒಡಿಶಾದ (Odisha) ಪುರಿ ಜಗನ್ನಾಥ ರಥಯಾತ್ರೆ (Puri Jagannath Rath Yatra) ಸಂದರ್ಭದಲ್ಲಿ ಉಂಟಾದ ಕಾಲ್ತುಳಿತ (Stampede)ದಲ್ಲಿ ಸಾವನ್ನಪ್ಪಿದವರ ಕುಟುಂಬಗಳಇಗೆ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ.
ಅಲ್ಲದೇ, ಈ ಘಟನೆಯಲ್ಲಿ ಸುಮಾರು 10 ಜನ ಕೂಡ ಗಾಯಗೊಂಡಿದ್ದರು. ಘಟನೆಗೆ ಕ್ಷಮೆಯಾಚಿಸಿರುವ ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಂಝಿ, ಸಾವನ್ನಪ್ಪಿದವರ ಕುಟುಂಬಸ್ಥರಿಗೆ ನೋವು ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ. ಅವರ ಕುಟುಂಬಸ್ಥರಿಗೆ ತಲಾ 25 ಲಕ್ಷರೂ. ಪರಿಹಾರ ನೀಡುವುದಾಗಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ನಾನು ಮತ್ತು ನನ್ನ ಸರ್ಕಾರ ಎಲ್ಲಾ ಜಗನ್ನಾಥ ಭಕ್ತರರಲ್ಲಿ ಕ್ಷಮೆಯಾಚಿಸುತ್ತದೆ. ಜೀವ ಕಳೆದುಕೊಂಡ ಭಕ್ತರ ಕುಟುಂಬಗಳಿಗೆ ನಾವು ನಮ್ಮ ಸಂತಾಪ ಸೂಚಿಸುತ್ತೇವೆ. ಈ ಆಳವಾದ ದುಃಖ ಸಹಿಸಿಕೊಳ್ಳುವ ಶಕ್ತಿಯನ್ನು ಅವರಿಗೆ ನೀಡಬೇಕೆಂದು ಮಹಾಪ್ರಭು ಜಗನ್ನಾಥನಲ್ಲಿ ಪ್ರಾರ್ಥಿಸುತ್ತೇನೆ. ದುರಂತದಲ್ಲಿ ಪ್ರಾಣ ಕಳೆದುಕೊಂಡ ಭಕ್ತರ ಕುಟುಂಬಗಳಿಗೆ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಲಾಗುವುದು. ಈ ಕಷ್ಟದ ಸಮಯದಲ್ಲಿ ರಾಜ್ಯ ಸರ್ಕಾರದವು ನಿಮ್ಮೊಂದಿಗಿರಲಿದೆ ಎಂದು ಭರವಸೆ ನೀಡಿದ್ದಾರೆ.
ಅಲ್ಲದೇಷ ಘಟನೆಗೆ ಸಂಬಂಧಿಸಿದಂತೆ ತನಿಖೆಗೆ ಆದೇಶ ಹೊರಡಿಸಿದ್ದಾರೆ.