ರಾಜ್ಯದಲ್ಲಿ ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಲಾರಿ ಮಾಲೀಕರು ಮುಷ್ಕರ ಹಮ್ಮಿಕೊಂಡಿದ್ದಾರೆ. ಹಲವೆಡೆ ಮುಷ್ಕರಕ್ಕೆ ಬೆಂಬಲ ವ್ಯಕ್ತವಾಗುತ್ತಿದೆ. ಆದರೆ, ಬೆಂಗಳೂರು ಹೊರವಲಯದಲ್ಲಿನ ಅತ್ತತಿಬೆಲೆ ಗಡಿಯಲ್ಲಿ ಎಂದಿನಂತೆ ಲಾರಿ ಹಾಗೂ ಗೂಡ್ಸ್ ವಾಹನಗಳು ಸಂಚಾರ ನಡೆಸುತ್ತಿವೆ.
ಅಂತರ್ ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ಅತ್ತಿಬೆಲೆ ಗಡಿಯಲ್ಲಿ ವಾಹನಗಳು ಸಂಚಾರ ನಡೆಸುತ್ತಿವೆ. ಇಂದು ಮಧ್ಯರಾತ್ರಿಯಿಂದಲೇ ಪ್ರತಿಭಟನೆಗೆ ಕರೆ ನೀಡಲಾಗಿದೆ. ಲಾರಿ ಮಾಲೀಕರ ಅಸೋಸಿಯೇಷನ್ ನ ಅಧ್ಯಕ್ಷ ಷಣ್ಮುಗಪ್ಪ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಮುಷ್ಕರದ ಹಿನ್ನೆಲೆಯಲ್ಲಿ ಅತ್ತಿಬೆಲೆ ಟೋಲ್ ನಿಂದ ಆರ್ ಟಿ ಓ ಕಚೇರಿವರೆಗೆ ರ್ಯಾಲಿ ನಡೆಯಿತು. ಆದರೆ, ಈ ಪ್ರದೇಶದಲ್ಲಿ ಎಂದಿನಂತೆ ರ್ಯಾಲಿಗಳು ಮಾತ್ರ ಸಂಚಾರ ನಡೆಸಿವೆ.