ಬೆಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಹಿನ್ನಲೆಯಲ್ಲಿ ಸಂಸದ ತೇಜಸ್ವಿ ಸೂರ್ಯ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಪತ್ರ ಬರೆದಿದ್ದಾರೆ..
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾದಳ(NIA) ಮೂಲಕ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ. ಕರಾವಳಿ, ಕರ್ನಾಟಕ ಭಾಗದಲ್ಲಿ ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಹತ್ಯೆ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇದರಿಂದಾಗಿ ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಿದೆ ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ..

2022 ರಲ್ಲಿ ಪ್ರವೀಣ್ ನೆಟ್ಟಾರು ಎಬುವವರನ್ನು ಇದೇ ಮಾದರಿಯಲ್ಲಿ ಹತ್ಯೆ ಮಾಡಲಾಗಿತ್ತು. ನಿಷೇಧಿತ PFI ಸಂಘಟನೆಯ ಸಮಾಜಘಾತುಕ ಶಕ್ತಿಗಳು ಇಂತಹ ಕಾರ್ಯದಲ್ಲಿ ನಿರತರಾಗಿವೆ. ಪಾರದರ್ಶಕ, ನಿಷ್ಪಕ್ಷಪಾತ ತನಿಖೆಯ ಅಗತ್ಯವಿದೆ. NIA ಮೂಲಕ ತನಿಖೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ.