ಮೈಸೂರು: ಇಂದು ದ್ವಿತೀಯ ಪಿಯುಸಿ ಫಲಿತಾಂಶ ಹೊರ ಬಿದ್ದಿದ್ದು, ಮೈಸೂರು ಜಿಲ್ಲೆಯ ಪಿರಿಯಾಣಪಟ್ಟಣ ತಾಲೂಕಿನ ಕೊಪ್ಪದ ಕಾಲೇಜಿನ ವಿದ್ಯಾರ್ಥಿನಿ ತೇಜಸ್ವಿನಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ್ದಾರೆ.
ಎಂ.ಎ. ತೇಜಸ್ವಿನಿ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ್ದಾರೆ. ತೇಜಸ್ವಿನಿ 600ಕ್ಕೆ 598 ಅಂಕ ಗಳನ್ನು ಪಡೆಯುವುದರ ಮೂಲಕ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ್ದಾರೆ. ತೇಜಸ್ವಿನಿ ಇಂಗ್ಲಿಷ್ ವಿಷಯಕ್ಕೆ 98 ಅಂಕಗಳನ್ನು ಗಳಿಸಿದ್ದಾರೆ. ಇನ್ನುಳಿದಂತೆ ಕನ್ನಡ, ಅರ್ಥಶಾಸ್ತ್ರ, ಬ್ಯೂಸಿನೆಸ್ ಸ್ಟಡೀಸ್, ಅಕೌಂಟೆನ್ಸಿ, ಕಂಪ್ಯೂಟರ್ ಸೈನ್ಸ್ ಗೆ 100 ಅಂಕ ಗಳಿಸಿದ್ದಾರೆ.
ಈ ವೇಳೆ ಮಾತನಾಡಿದ ಅವರು, ಗುರುಗಳು ಹಾಗೂ ತಂದೆ-ತಾಯಿಯ ಸಹಕಾರದಿಂದಾಗಿ ಈ ಸಾಧನೆ ಮಾಡಿರುವುದಾಗಿ ಹೇಳಿದ್ದಾರೆ.