ಗದಗ: ನಗರದಲ್ಲಿನ ತೋಂಟದಾರ್ಯ ಮಠದ ಆವರಣದಲ್ಲಿ ಸಂಭ್ರಮದಿಂದ ಜಾತ್ರೆ ನಡೆದಿದೆ.
ಭಕ್ತರ ಜಯ ಘೋಷಗಳ ಮಧ್ಯೆ ಅದ್ಧೂರಿಯಾಗಿ ರಥೋತ್ಸವ ನಡೆದಿದೆ. ಪೀಠಾಧಿಪತಿ ಡಾ. ತೋಂಟದ ಸಿದ್ದರಾಮ ಶ್ರೀಗಳ ನೇತೃತ್ವದಲ್ಲಿ ಜಾತ್ರೆ ನಡೆದಿದ್ದು, ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು.
ರಥಕ್ಕೆ ಉತ್ತತ್ತಿ ಎಸೆದು ಭಕ್ತರು ಭಕ್ತಿ ಸಮರ್ಪಿಸಿದ್ದಾರೆ. ಕೇವಲ ಗದಗ ಜಿಲ್ಲೆ ಅಷ್ಟೇ ಅಲ್ಲದೇ, ದೆಹಲಿ, ಧಾರವಾಡ, ಬಾಗಲಕೋಟೆ, ವಿಜಯಪುರ, ಕಲ್ಯಾಣ ಕರ್ನಾಟಕದ ವಿವಿಧ ಜಿಲ್ಲೆಗಳು ಸೇರಿದಂತೆ ಮಹಾರಾಷ್ಟ್ರ, ಆಂಧ್ರ, ತೆಲಂಗಾಣದಿಂದಲೂ ಭಕ್ತರ ದಂಡ ಹರಿದು ಬಂದಿತ್ತು.
ತೋಂಟದಾರ್ಯ ಮಠ ಉತ್ತರ ಕರ್ನಾಟಕದ ಪ್ರಸಿದ್ಧ ಮಠಗಳಲ್ಲಿ ಒಂದು. ಹೀಗಾಗಿ ಈ ಮಠಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುತ್ತಾರೆ.