ಬೆಂಗಳೂರು: ಜಯನಗರದ ಚಂದ್ರಗುಪ್ತ ಮೌರ್ಯ(ಶಾಲಿನಿ ಆಟದ) ಮೈದಾನದಲ್ಲಿ ರಕ್ಷಾ ಫೌಂಡೇಷನ್ ವತಿಯಿಂದ 13ನೇ ವರ್ಷದ ಸಾವಿರಾರು ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉಚಿತವಾಗಿ 2 ಲಕ್ಷ ನೋಟ್ ಪುಸ್ತಕಗಳ ವಿತರಣೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ, ಅನಾಥ ಆಶ್ರಮದ ವಿದ್ಯಾರ್ಥಿಗಳ ದತ್ತು ಸ್ವೀಕಾರ ಕಾರ್ಯಕ್ರಮ ಇಂದು ನೆರವೇರಿತು.
ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ರಕ್ಷಾ ಫೌಂಡೇಷನ್ ಸಂಸ್ಥಾಪಕ, ಶಾಸಕ ಸಿ.ಕೆ. ರಾಮಮೂರ್ತಿ, ಶಾಸಕ ಉದಯ್ ಗರುಡಾಚಾರ್, ಬಿಗ್ ಬಾಸ್ ಖ್ಯಾತಿಯ ಪ್ರಥಮ್, ನಿಕಟಪೂರ್ವ ಬಿಬಿಎಂಪಿ ಸದಸ್ಯ ನಾಗರತ್ನ ರಾಮಮೂರ್ತಿ, ಬಿಗ್ ಬಾಸ್ ಖ್ಯಾತಿಯ ಪ್ರಥಮ್, ನಟ ವಸಿಷ್ಟ ಸಿಂಹ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ, ಲ್ಯಾಪ್ ಟಾಪ್ ಗಳನ್ನು ವಿತರಿಸಿದರು.
ಈ ವೇಳೆ ಬಿ.ವೈ.ವಿಜಯೇಂದ್ರ ಮಾತನಾಡಿ, ರಕ್ಷಾ ಫೌಂಡೇಷನ್ ಸ್ಥಾಪಕ, ಶಾಸಕ ರಾಮಮೂರ್ತಿ ನೇತೃತ್ವದಲ್ಲಿ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ಸಹಕಾರ ನೀಡುತ್ತಿದ್ದಾರೆ. ಇಂದು 11ನೇ ವಿಶ್ವ ಯೋಗ ದಿನಾಚರಣೆ ಅಚರಿಸಲಾಗುತ್ತಿದೆ. ಭಾರತದ ಯೋಗ ವಿಶ್ವಮಟ್ಟದಲ್ಲಿ ಪ್ರಧಾನಿ ನರೇಂದ್ರಮೋದಿರವರ ಹೆಚ್ಚು ಪ್ರಚಲಿತಕ್ಕೆ ಬಂತು ಎಂದರು.
ಮಕ್ಕಳು ದೇವರ ಸಮಾನ, ಅವರ ಮನಸ್ಸಿನಲ್ಲಿ ಯಾವ ಕೆಟ್ಟ ಚಿಂತನೆ ಇರುವುದಿಲ್ಲ. ಜಾತಿ, ಮತ, ಪಂಥ ಭೇದವಿರುವುದಿಲ್ಲ. ಸಾಧನೆ ಇಲ್ಲದೇ ಹೋದರೆ ಸಾವಿಗೆ ಅರ್ಥವಿಲ್ಲ. ಹುಟ್ಟಿದ ಮೇಲೆ ಸಾಧನೆ ಮಾಡಿ ನಿಲ್ಲಬೇಕು ಎಂದು ಹೇಳಿದರು.
ಆರ್.ಅಶೋಕ್ ಮಾತನಾಡಿ, ಪ್ರತಿ ವರ್ಷ ಅಪರೂಪದ ಕಾರ್ಯಕ್ರಮವನ್ನು ರಕ್ಷಾ ಫೌಂಡೇಷನ್ ಮಾಡುತ್ತಿದೆ. ಶಿಕ್ಷಣಕ್ಕೆ ಸಹಕಾರ ನೀಡುತ್ತಿದ್ದಾರೆ. ಗುರುಗಳು ಪಾಠ ಮಾಡುತ್ತಾರೆ. ತಂದೆ, ತಾಯಿ ಹೇಳಿಕೊಡುತ್ತಾರೆ. ಅದರೆ ನಾವೇ ಪರೀಕ್ಷೆ ಬರೆಯಬೇಕು. ಯಾರು ನಿಮಗೆ ಸಹಕಾರ ನೀಡುವುದಿಲ್ಲ. ಆತ್ಮಸ್ಥೈರ್ಯದಿಂದ ಪರೀಕ್ಷೆ ಬರೆದು ಉತ್ತಮ ಅಂಕಗಳಿಸಿದರೆ ಜೀವನದಲ್ಲಿ ಉತ್ತಮ ಅಂಕಗಳಿಸಿ, ಸಾಧನೆ ಮಾಡಬಹುದು ಎಂದು ಹೇಳಿದರು
ಪಾಲಿಕೆ ಮಾಜಿ ಸದಸ್ಯ ಕೆ.ಉಮೇಶ್ ಶೆಟ್ಟಿ, ಸೋಮಶೇಖರ್, ಗೋವಿಂದನಾಯ್ಡು, ದೀಪಿಕಾ ಮಂಜುನಾಥ್ ರೆಡ್ಡಿ, ಚನ್ನಗಿರಿಯಪ್ಪ, ಚಂದ್ರಶೇಖರ ರಾಜು, ಬಿಜೆಪಿ ಮುಖಂಡ ತಮ್ಮೇಶ್ ಗೌಡ, ತಿರುಪತಿ ದೇವಸ್ಥಾನ ಆಡಳಿತ ಮಂಡಳಿ ಸದಸ್ಯ ನರೇಶ್ ಭಾಗಿಯಾಗಿದ್ದರು.