ಬೆಂಗಳೂರು: ಮುಸ್ಲಿಂರಿಗೆ ಗುತ್ತಿಗೆಯಲ್ಲಿ ಶೇ. 4ರಷ್ಟು ಮೀಸಲಾತಿ ವಿಚಾರಕ್ಕೆ ಸಂಭಂಧಪಟ್ಟಂತೆ ಅಧಿವೇಶನದಲ್ಲಿ ಬಿಜೆಪಿ ನಾಯಕರು ಸ್ಪೀಕರ್ ಮೇಲೆ ಪೇಪರ್ ಹರಿದು ಪ್ರತಿಭಟನೆ ನಡೆಸಿದ್ದರು. ಆಗ ವಿಧಾನಸಭೆಯಲ್ಲಿ 6 ತಿಂಗಳುಗಳ ಕಾಲ ಸ್ಪೀಕರ್ ಯು ಟಿ ಖಾದರ್ರವರು ಹದಿನೆಂಟು ಶಾಸಕರ ಅಮಾನತು ಮಾಡಿ ಆದೇಶ ಹೊರಡಿಸಿದ್ದರು. ಹೀಗಾಗಿ ಬಿಜೆಪಿ ನಿಯೋಗ ಮನವಿ ಮಾಡಿದೆ.
18 ಶಾಸಕರ ಆದೇಶ ಹಿಂಪಡೆಯುವಂತೆ ಮನವಿ ಸಲ್ಲಿಸಲಾಗಿದೆ. ಅದರ ಬೆನ್ನಲ್ಲೇ ಇದೀಗ 18 ಶಾಸಕರ ಅಮಾನತು ಹಿಂತೆಗೆದುಕೊಳ್ಳಲು ಸ್ಪೀಕರ್ ಅವರಿಗೆ ಮಾರ್ಗದರ್ಶನ ನೀಡುವಂತೆ 18 ಶಾಸಕರು ಆರ್.ಅಶೋಕ್ ನೇತೃತ್ವದಲ್ಲಿ ರಾಜ್ಯಪಾಲರಿಗೆ ಮನವಿ ಪತ್ರವನ್ನು ಬರೆದಿದ್ದಾರೆ. ಇವತ್ತು ರಾಜ್ಯಪಾಲರನ್ನ ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಲಿದ್ದಾರೆ. ಇದಕ್ಕೂ ಒಂದು ವೇಳೆ ಸ್ಪೀಕರ್ ಅಮಾನತು ವಾಪಾಸ್ ತೆಗೆದುಕೊಳ್ಳದೆ ಹೋದರೆ ಕಾನೂನು ಹೋರಾಟಕ್ಕೆ ಬಿಜೆಪಿ ನಿಯೋಗ ಮುಂದಾಗಿದ್ದು. ಮುಂದೆ ಸ್ಪೀಕರ್ ಯಾವ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಕಾದು ನೋಡಬೇಕಾಗಿದೆ.