ಬೆಂಗಳೂರು: ಐಪಿಎಲ್ ಚಾಂಪಿಯನ್ ಆರ್ ಸಿಬಿ ತಂಡದ ಸದಸ್ಯರು ಇಂದು ತವರಿಗೆ ಆಗಮಿಸಿದ್ದು, ಅಭಿಮಾನಿಗಳು ಸಂಭ್ರಮದಿಂದ ಬರಮಾಡಿಕೊಂಡಿದ್ದಾರೆ.
2025ರ ಫೈನಲ್ (IPL 2025 Final) ಪಂದ್ಯದಲ್ಲಿ ಕಪ್ ಗೆದ್ದ ಆರ್ಸಿಬಿ (RCB) ತಂಡ ಅಭಿಮಾನಿಗಳೊಂದಿಗೆ ವಿಜಯೋತ್ಸವ ಆಚರಿಸಲು ತವರಿಗೆ ಆಗಮಿಸಿದೆ. ಹೆಚ್ ಎಎಲ್ ಗೆ ವಿಶೇಷ ವಿಮಾನದಲ್ಲಿ ಆರ್ ಸಿಬಿ ಆಟಗಾರರು ಆಗಮಿಸಿದ್ದಾರೆ. ಈ ವೇಳೆ ಎಬಿಡಿ ಹಾಗೂ ಕ್ರಿಸ್ ಗೇಲ್ ಕೂಡ ಬಂದಿದ್ದಾರೆ.
ಆರ್ಸಿಬಿ ತಂಡ ತಾಜ್ ವೆಸ್ಟೆಂಡ್ ಹೋಟೆಲ್ಗೆ ತೆರಳಿ, ವಿಶ್ರಾಂತಿ ಪಡೆದು, ಸಂಜೆ 4ಕ್ಕೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಟ್ರೋಫಿ ನೀಡಲಿದೆ. ಸಿಎಂ ಭೇಟಿ ನಂತರ 5ಕ್ಕೆ ವಿಧಾನಸೌಧದಿಂದ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ (Chinnaswamy Stadium) ತಂಡದ ಸದಸ್ಯರು ತೆರಳಿ ಸಂಭ್ರಮಾಚರಣೆ ನಡೆಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಆರ್ ಸಿಬಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.